Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಂಡ್ಯದಲ್ಲಿ ಕೊರೊನಾ ದೃಢ : ಕ್ವಾರಂಟೈನ್ ನಲ್ಲಿರುವ ವ್ಯಕ್ತಿ

---Advertisement---

 

ಮಂಡ್ಯ: ಮೊದಲೇ ಕೊರೊನಾದಿಂದ ಗಾಬರಿಗೊಂಡ ಜನರಿಗೆ ಮತ್ತೊಂದು ಶಾಕ್ ಸಿಕ್ಕಿದೆ. ಕೇರಳದಲ್ಲಿ ಕಾಣಿಸಿಕೊಳ್ಳುತ್ತಿರುವ ಕೊರೊನಾ ವೈರಸ್ ಬಗ್ಗೆ ಈಗಾಗಲೇ ರಾಜ್ಯದಲ್ಲೂ ಎಚ್ಚರಿಕೆ ವಹಿಸಲಾಗಿತ್ತು. ಆದರೆ ಇದೀಗ ಕರ್ನಾಟಕದಲ್ಲೂ ವೈರಸ್ ಕಂಡು ಬಂದಿದೆ. ಮಂಡ್ಯದಲ್ಲಿ ಒಂದು ಕೇಸ್ ದಾಖಲಾಗಿದೆ.

ಕೊರೊನಾ ಬಂದಂತ ಸಮಯದಲ್ಲಿ ಒಬ್ಬರಿಗೆ ಬಂದಿದ್ದೇ ತಡ, ಹೇಗೆ ಬೇಗನೇ ಹರಡುತ್ತಿತ್ತು ಎಂಬುದು ಎಲ್ಲರಿಗೂ ಗೊತ್ತು. ಇದೀಗ ಮಂಡ್ಯದಲ್ಲಿ ವೈರಸ್ ಕಂಡು ಬಂದಿರುವುದು ಒಂದಷ್ಟು ಆತಂಕಕ್ಕೆ ಕಾರಣವಾಗಿದೆ. ಮದ್ದೂರಿನ 75 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಅದಿ ಜಿಎನ್1ರೂಪಾಂತರಿ ವೈರಸ್ ಆಗಿದೆಯೇ ಎಂದು ವೈದ್ಯರು ಇನ್ನು ದೃಢಪಟ್ಟಿಲ್ಲ.

ಕೊರೊನಾ ದೃಢಪಟ್ಟಿರುವ ವ್ಯಕ್ತಿಗೆ ಪ್ರಯಾಣದ ಇತಿಹಾಸವಿಲ್ಲ. ಆದರೆ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಪರೀಕ್ಷೆ ಮಾಡಿದಾಗ, ಆ ವ್ಯಕ್ತಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಸೋಂಕಿತ ವ್ಯಕ್ತಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಅವರ ಜೊತೆಗೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ಇನ್ನು ಸೋಂಕಿನ ಬಗ್ಗೆ ಸುದ್ದಿಯಾಗುತ್ತಿದ್ದಂತೆಯೇ ಸಚಿವ ದಿನೇಶ್ ಗುಂಡೂರಾವ್ ಜನರಿಗೆ ಎಚ್ಚರದಿಂದ ಇರಲು ಸೂಚಿಸಿದ್ದಾರೆ. ಲಕ್ಷಣಗಳು ಕಂಡು ಬಂದರೆ ತಕ್ಷಣ ಆರ್ಟಿಪಿಎಸ್ ಟೆಸ್ಟ್ ಮಾಡಿಸಿಕೊಳ್ಳುವುದು ಉತ್ತಮ ಎಂದಿದ್ದಾರೆ. ಜೊತೆಗೆ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂಬ ಸೂಚನೆಯನ್ನು ನೀಡಿದ್ದಾರೆ. ಕೊರೊನಾ ಬಂದಂತ ಸಮಯದಲ್ಲಿ ಏನೆಲ್ಲಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿತ್ತೋ, ಅದೇ ಮಾರ್ಗಸೂಚಿಗಳನ್ನು ಪಾಲನೆ ಮಾಡಿದರೆ ಅಪಾಯದಿಂದ ತಪ್ಪಿಸಿಕೊಳ್ಳಬಹುದು. ವಾತಾವರಣ ಕೂಡ ನೆಗಡಿ, ಜ್ವರ ಕಾಣೀಸಿಕೊಳ್ಳುವಂತೆ ಇದೆ. ಹೀಗಾಗಿ ಆರೋಗ್ಯ ಕಾಪಾಡಿಕೊಳ್ಳುವುದಕ್ಕೂ ನಿಯಮಗಳನ್ನು ಪಾಲನೆ ಮಾಡುವುದು ಉತ್ತಮ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment