ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕೊಡಗು: ಕೊರೊನಾ ಎಂದರೆ ಇಡೀ ಜಗತ್ತು ಭಯ ಪಡುತ್ತದೆ. ಅಷ್ಟು ಜೀವನದ ಪಾಠ ಕಲಿಸಿದೆ. ಇನ್ನು ಕೂಡ ಅದೆಷ್ಟೋ ಜನ ನಷ್ಟದಿಂದ ಮೇಲೆ ಎದ್ದಿಲ್ಲ. ಈಗ ಮತ್ತೆ ರಾಜ್ಯಕ್ಕೆ ಕೊರೊನಾ ಬರುತ್ತೆ ಅಂದಾಗ ಜನರ ಮನಸ್ಥಿತಿ ಏನಾಗಬೇಡ. ಈಗ ಆತಂಕ ಮತ್ತೆ ಶುರುವಾಗಿದೆ. ಕೇರಳದಲ್ಲಿ ಕೊರೊನಾ ವೈರಸ್ ಕಾಣಿಸಿಕೊಳ್ಳುತ್ತಿದೆ.
ಇದರ ಆತಂಕದಿಂದ ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ವಿರಾಜಪೇಟೆಯಲ್ಲಿ ತಪಾಸಣೆ ಮಾಡಲಾಗುತ್ತಿದೆ. ರಾಜ್ಯಕ್ಕೆ ಕೇರಳದಿಂದ ಆಗಮಿಸುವವರ ತಪಾಸಣೆ ನಡೆಸಲಾಗುತ್ತಿದೆ. ಈಗಾಗಲೇ ವಿರಾಜಪೇಟೆಯಲ್ಲಿ ಇಬ್ಬರು ಶಂಕಿತರಿದ್ದು, ಇಬ್ಬರಿಗೂ ರಕ್ತ ಪರೀಕ್ಷೆಮಾಡಿಸಲಾಗಿದೆ. ಪಾಸಿಟಿವ್ ಬಂದರೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತದೆ.
ಕೊರೊನಾ ಆತಂಕದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದು, 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಕಾಯಿಲೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೇಂದ್ರ ಸರ್ಕಾರ ಹಾಗೂ ತಜ್ಞರ ಜೊತೆಗೆ ಚರ್ಚೆ ನಡೆಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲು ಚರ್ಚೆ ನಡೆಸಿದ್ದೇವೆ. ಹೆಚ್ಚು ಟೆಸ್ಟ್ ಮಾಡುವತೆ ಆರೋಗ್ಯ ಇಲಾಖೆ ಸೂಚಿಸಿದೆ. ಕೊರೊನಾ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೇರಳ ಗಡಿಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್