Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಕ್ಕೆ ಮತ್ತೆ ಕೊರೊನಾ ಸಂಕಟ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು..?

---Advertisement---

 

ಕೊಡಗು: ಕೊರೊನಾ ಎಂದರೆ ಇಡೀ ಜಗತ್ತು ಭಯ ಪಡುತ್ತದೆ. ಅಷ್ಟು ಜೀವನದ ಪಾಠ ಕಲಿಸಿದೆ. ಇನ್ನು ಕೂಡ ಅದೆಷ್ಟೋ ಜನ ನಷ್ಟದಿಂದ ಮೇಲೆ ಎದ್ದಿಲ್ಲ. ಈಗ ಮತ್ತೆ ರಾಜ್ಯಕ್ಕೆ ಕೊರೊನಾ ಬರುತ್ತೆ ಅಂದಾಗ ಜನರ ಮನಸ್ಥಿತಿ ಏನಾಗಬೇಡ. ಈಗ ಆತಂಕ ಮತ್ತೆ ಶುರುವಾಗಿದೆ. ಕೇರಳದಲ್ಲಿ ಕೊರೊನಾ ವೈರಸ್ ಕಾಣಿಸಿಕೊಳ್ಳುತ್ತಿದೆ.

ಇದರ ಆತಂಕದಿಂದ ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ವಿರಾಜಪೇಟೆಯಲ್ಲಿ ತಪಾಸಣೆ ಮಾಡಲಾಗುತ್ತಿದೆ. ರಾಜ್ಯಕ್ಕೆ ಕೇರಳದಿಂದ ಆಗಮಿಸುವವರ ತಪಾಸಣೆ ನಡೆಸಲಾಗುತ್ತಿದೆ. ಈಗಾಗಲೇ ವಿರಾಜಪೇಟೆಯಲ್ಲಿ ಇಬ್ಬರು ಶಂಕಿತರಿದ್ದು, ಇಬ್ಬರಿಗೂ ರಕ್ತ ಪರೀಕ್ಷೆಮಾಡಿಸಲಾಗಿದೆ. ಪಾಸಿಟಿವ್ ಬಂದರೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತದೆ.

ಕೊರೊನಾ ಆತಂಕದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದು, 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಕಾಯಿಲೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೇಂದ್ರ ಸರ್ಕಾರ ಹಾಗೂ ತಜ್ಞರ ಜೊತೆಗೆ ಚರ್ಚೆ ನಡೆಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲು ಚರ್ಚೆ ನಡೆಸಿದ್ದೇವೆ. ಹೆಚ್ಚು ಟೆಸ್ಟ್ ಮಾಡುವತೆ ಆರೋಗ್ಯ ಇಲಾಖೆ ಸೂಚಿಸಿದೆ. ಕೊರೊನಾ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೇರಳ ಗಡಿಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment