Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಸತಿ ಶಾಲೆಗಳಲ್ಲಿ ಕೊರೊನಾ ಹೆಚ್ಚಳ : ಹೊಸ ಮಾರ್ಗಸೂಚಿಗೆ ಮುಂದಾದ ಸರ್ಕಾರ..!

Facebook
Twitter
Telegram
WhatsApp

ಬೆಂಗಳೂರು: ಕೊರೊನಾದಿಂದಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಸಾಕಷ್ಟು ಕುಂಠಿತವಾಗಿದೆ. ಇದು ಮಕ್ಕಳ ಭವಿಷ್ಯಕ್ಕೂ ಉತ್ತಮವಾದುದ್ದಲ್ಲ. ಇದನ್ನ ಅರಿತಿದ್ದೇ ಸರ್ಕಾರ ಶಾಲೆಗಳನ್ನ ಶುರು ಮಾಡಿದೆ. ಆದ್ರೆ ಶುರುವಾದ ಕೆಲವೇ ತಿಂಗಳಲ್ಲಿ ಇದೀಗ ಕೊರೋನಾ ಹಬ್ಬುತ್ತಿದೆ. ಅದರಲ್ಲೂ ವಿದ್ಯಾರ್ಥಿಗಳಲ್ಲೇ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಪೋಷಕರು ಸಹಜವಾಗಿಯೇ ಆತಂಕಕ್ಕೆ ಒಳಗಾಗಿದ್ದಾರೆ. ಜೊತೆಗೆ ಶಾಲೆ-ಕಾಲೇಜು ಮುಚ್ತಾರಾ ಅನ್ನೋ ಗೊಂದಲದಲ್ಲಿದ್ದಾರೆ. ಅದಕ್ಕೆ ಈಗಾಗ್ಲೇ ಸಚಿವ ನಾಗೇಶ್ ಅವರು ಸ್ಪಷ್ಟ ಉತ್ತರವನ್ನು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಶಾಲೆಗಳನ್ನ ಮುಚ್ಚಲ್ಲ ಎಂದು.

ಆದ್ರೆ ವಸತಿ ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ತರಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ನಾಗೇಶ್, ವಸತಿ ಶಾಲೆಗಳಲ್ಲಿ ಮಕ್ಕಳಿ ಹಾಗೂ ಶಿಕ್ಷಕರಿಗೆ ಕೊರೊನಾ ಹೆಚ್ಚಳವಾಗುತ್ತಿದೆ. ಈಗಾಗಲೇ ಅಲ್ಲಿನ ಆಡಳಿತಾಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದೇವೆ. ಕೊರೊನಾ ಮಾರ್ಗಸೂಚಿಗಳನ್ನ ಪಾಲಿಸಿ ಎಂದಿದ್ದೇವೆ. ಸೋಂಕು ನಿಯಂತ್ರಣ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳುವುದಕ್ಕೂ ಸೂಚನೆ ನೀಡಲಾಗಿದೆ. ಶಾಲಾ ಕಾಲೇಜು ಬಂದ್ ಮಾಡುವುದು ಬೇಡವೆಂದು ತಜ್ಞರು ತಿಳಿಸಿದ್ದಾರೆ.

ಶಾಲೆ ಬಂದ್ ಮಾಡಿ ಆನ್ಲೈನ್ ಕ್ಲಾಸ್ ಮಾಡುವುದರಿಂದ ಮಕ್ಕಳ ಶೈಕ್ಷಣಿಕ ಬೆಳವಣಿಗೆಯೂ ಕುಂಠಿತವಾಗುತ್ತದೆ. ಆನ್ಲೈನ್ ಕ್ಲಾಸ್ನಲ್ಲಿ ಮಕ್ಕಳಿಗೆ ಅಷ್ಟಾಗಿ ಅರ್ಥವಾಗುವುದಿಲ್ಲ. ಶಾಲೆ ಮುಚ್ಚುವುದು ಬೇಡ. ಕೊರೋನಾ ತಡೆಯಲು ಮಾರ್ಗಸೂಚಿಗಳನ್ನ ಅನುಸರಿಸಲು ಶಾಲೆಗಳಿಗೆ ತಿಳಿಸಿಲಾಗಿದೆ. ನಾನು ಕೂಡ ಡಿಸೆಂಬರ್ 10ರ ನಂತರ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!