ದೇಶದಲ್ಲಿ ಕರೋಣ ಉಲ್ಬಣ : ಕಳೆದ 24 ಗಂಟೆಯಲ್ಲಿ ಆರು ಮಂದಿ ಸಾವು, 692 ಹೊಸ ಪ್ರಕರಣಗಳು

 

ಸುದ್ದಿಒನ್ : ದೇಶದಲ್ಲಿ ಕೊರೊನಾ ವೈರಸ್ ನಿಧಾನವಾಗಿ ದೇಶದಾದ್ಯಂತ ಹರಡುತ್ತಿದೆ. ಹೊಸ ಪ್ರಕರಣಗಳ ಸಂಖ್ಯೆ ಮತ್ತು ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ. ಒಂದೇ ದಿನದಲ್ಲಿ ಆರು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರಲ್ಲಿ ಇಬ್ಬರು ಮಹಾರಾಷ್ಟ್ರದವರು ಮತ್ತು ತಲಾ ಒಬ್ಬರು ದೆಹಲಿ, ಕರ್ನಾಟಕ, ಕೇರಳ ಮತ್ತು ಪಶ್ಚಿಮ ಬಂಗಾಳದವರಾಗಿದ್ದಾರೆ. 

ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 692 ಜನರಿಗೆ ಕೋವಿಡ್‌ ಸೋಂಕು ತಗುಲಿದೆ.  ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 4097 ಕ್ಕೆ ತಲುಪಿದೆ. ಹೊಸ ರೂಪಾಂತರ ಜೆಎನ್ 1 ನಿಂದಾಗಿ ದೇಶದಲ್ಲಿ ಹೊಸ ಕರೋನಾ ಪ್ರಕರಣಗಳಲ್ಲಿ ಭಾರಿ ಹೆಚ್ಚಳವಾಗಿದೆ.

JN1 ಕರೋನಾ ರೂಪಾಂತರದ ಮೊದಲ ಪ್ರಕರಣ ಬುಧವಾರ ದೆಹಲಿಯಲ್ಲಿ ದಾಖಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಇನ್ನೂ ಎರಡು ಓಮಿಕ್ರಾನ್ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಅವರು ಹೇಳಿದರು. ಬುಧವಾರದವರೆಗೆ ದೇಶದಲ್ಲಿ ಜೆಎನ್ 1 ರೂಪಾಂತರದ 109 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *