ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ ,(ಮೇ.20) : ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ದಳವಾಹಿಹಳ್ಳಿ ಗ್ರಾಮಕ್ಕೆ ಶನಿವಾರ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿ ವಾಹನವು ಭೇಟಿ ನೀಡಿ ಹತ್ತಿ ಬೆಳೆ ಪರಿಶೀಲಿಸಿದಾಗ ಸಸ್ಯ ಹೇನುಗಳು ಹಾಗೂ ಕರಿ ಜೀಗಿ ಹುಳುವಿನ ಬಾಧೆ ಕಂಡುಬಂದಿರುತ್ತದೆ.
ಜಿಲ್ಲೆಯಲ್ಲಿ ಪ್ರಸ್ತುತ ಹತ್ತಿ ಬೆಳೆಯು 30-60 ದಿನಗಳ ಬೆಳವಣಿಗೆ ಹಂತದಲ್ಲಿರುತ್ತದೆ. ಸಸ್ಯ ಹೇನುಗಳು ಹಾಗೂ ಕರಿ ಜೀಗಿ ಹುಳುವಿನ ಬಾದೆ ಚಿತ್ರದುರ್ಗ ತಾಲ್ಲೂಕಿನ ಕಸಬಾ ಹೋಬಳಿಯ ದಳವಾಹಿಹಳ್ಳಿ ಗ್ರಾಮ ಸೇರಿದಂತೆ ಸುತ್ತ-ಮುತ್ತ ಪ್ರದೇಶಗಳಲ್ಲಿ ಹಾಗೂ ಹತ್ತಿ ಬೆಳದಂತಹ ಉಳಿದ ಎಲ್ಲಾ ತಾಲ್ಲೂಕುಗಳಲ್ಲಿಯೂ ಸಹ ಈ ಸಂದರ್ಭದಲ್ಲಿ ಕಂಡುಬರುವ ಸಾಧ್ಯತೆ ಇರುತ್ತದೆ.
ಈ ಹುಳುವಿನ ಹತೋಟಿಗಾಗಿ ಥಿಯಾಮೇಥಾಕ್ಸಮ್ 0.3 ಗ್ರಾಂ ಪ್ರತಿ ಲೀಟರ್ ಅಥವಾ ಪ್ಲೋನಿಕಮಿಡ್ 0.3 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದರಿಂದ ಈ ಹುಳುವಿನ ಬಾಧೆಯನ್ನು ಹತೋಟಿಗೆ ತರಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕರು ಹಾಗೂ ವಿಷಯ ತಜ್ಞರಾದ ಮಂಜುನಾಥಸ್ವಾಮಿ ರೈತ ಬಾಂದವರಿಗೆ ಸಲಹೆ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್