Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

88 ವರ್ಷಗಳ ನಂತರ ವಿ.ವಿ.ಸಾಗರ ಜಲಾಶಯ ಸಂಪೂರ್ಣ ಭರ್ತಿಗೆ ಕ್ಷಣಗಣನೆ : ಐತಿಹಾಸಿಕ ಘಟನೆ ಕಣ್ಮನ ತುಂಬಿಕೊಳ್ಳಲು ಹೆಚ್ಚಿದ ಕಾತುರ

Facebook
Twitter
Telegram
WhatsApp

ಚಿತ್ರದುರ್ಗ,(ಸೆಪ್ಟೆಂಬರ್01) : ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬಯಲುಸೀಮೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಲು ಕ್ಷಣಗಣನೆ ಆರಂಭವಾಗಿದ್ದು, ಆ ಐತಿಹಾಸಿಕ ಘಟನೆ ಕಣ್ಮನ ತುಂಬಿಕೊಳ್ಳಲು ಕಾತುರ ಹೆಚ್ಚಿದೆ.

ವಿ.ವಿ.ಸಾಗರ ಜಲಾಶಯ ಸುಮಾರು 88 ವರ್ಷಗಳ ನಂತರ ಭರ್ತಿಯಾಗಲಿದ್ದು, ಕೋಡಿಯ ಮೂಲಕ ನದಿಗೆ ನೀರು ಹರಿಯಲಿದೆ. ವಿವಿ ಸಾಗರ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಿಂದಾಗಿ ಡ್ಯಾಂನ ಗರಿಷ್ಟ ಮಟ್ಟ ಸೆಪ್ಟೆಂಬರ್ 01ರಂದು ಗುರುವಾರ 129.85 ಅಡಿಗೆ ಏರಿಕೆಯಾಗಿದ್ದು, ಒಳಹರಿವು 4564 ಕ್ಯೂಸೆಕ್ ಇದೆ. ಗರಿಷ್ಟ ಮಟ್ಟ 130 ಅಡಿ ತಲುಪಲು ಇನ್ನೂ ಕೇವಲ 03 ಇಂಚು (ಕಾಲು ಅಡಿ) ಮಾತ್ರ ಬಾಕಿ ಇರುತ್ತದೆ. ಹೆಚ್ಚುವರಿ ನೀರು ಕೋಡಿಯ ಮೂಲಕ ನದಿಗೆ ಹರಿಯಲಿದ್ದು, ಈಗಾಗಲೇ ನದಿಪಾತ್ರದ ಇಕ್ಕೆಲಗಳ ಹಾಗೂ ತಗ್ಗು ಪ್ರದೇಶದ ಜನಗಳಿಗೆ ತಮ್ಮ ಆಸ್ತಿ-ಪಾಸ್ತಿ, ಜಾನುವಾರುಗಳನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಿಕೊಳ್ಳಲು ಪ್ರಕಟಣೆ ಹಾಗೂ ಪ್ರಚಾರದ ತಿಳುವಳಿಕೆ ನೀಡಲಾಗಿದೆ.

1933-34ರಲ್ಲಿ ಅಂದರೆ ಸುಮಾರು 88 ವರ್ಷಗಳ ನಂತರ ಡ್ಯಾಂ ಮತ್ತೆ ಕೋಡಿ ಬೀಳುತ್ತಿದ್ದು, ನದಿಪಾತ್ರವನ್ನು ಜಂಗಲ್, ಜಾಲಿ ಇತ್ಯಾದಿಗಳಿಂದ ಮುಕ್ತಗೊಳಿಸಿ ಸುಗಮ ಹರಿವಿಗೆ ಕ್ರಮಕೈಗೊಳ್ಳಲಾಗಿದೆ. ಇನ್ನೂ ಅಧಿಕ ನೀರು ಬಂದಲ್ಲಿ ಡ್ಯಾಂನ ಕೆಳಭಾಗದ ಕೆ.ಕೆ ಅಣೆಕಟ್ಟು ಮೂಲಕ ಕಾಲುವೆಗಾಗಲಿ ಅಥವಾ ನದಿಗಾಗಲಿ ನೀರು ಗೇಟಿನ ಮೂಲಕ ಹೊರಬಿಡಲು ಅವಕಾಶವಿದ್ದು, ಅನುಮತಿಗಾಗಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಪ್ರಸ್ತಾವನೆ ಸಲ್ಲಿಸಿದೆ.

ಡ್ಯಾಂ ಹಿನ್ನೀರಿನ ಹತ್ತಿರದ ಕೋಡಿಯ ಬಳಿ ಜನ-ಜಾನುವಾರು ನೀರಿಗಿಳಿಯದಂತೆ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಕ್ಯಾಂಪ್ ವಿಶ್ವೇಶ್ವರಯ್ಯ ಜಲನಿಗಮದ ಭದ್ರಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಆರ್.ಚಂದ್ರಮೌಳಿ ಕೋರಿದ್ದಾರೆ.

 

ಮಾಹಿತಿ ಮತ್ತು ಫೋಟೋ  : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!