Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಶಸ್ವಿ ಕಾರ್ಯಾಚರಣೆ ಸುಖಾಂತ್ಯಕ್ಕೆ ಕ್ಷಣಗಣನೆ : 12 ದಿನಗಳ ನಂತರ ಹೊರಬರಲಿರುವ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರು

---Advertisement---

ಸುದ್ದಿಒನ್, ನವದೆಹಲಿ, ನವೆಂಬರ್.23 : ಉತ್ತರಾಖಂಡ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗವೊಂದು ಕುಸಿದು 12 ದಿನಗಳು ಕಳೆದಿವೆ. ಅದರಲ್ಲಿ ಜೀವಂತವಾಗಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ಅಧಿಕಾರಿಗಳು ವಿಶೇಷ ಕಾರ್ಯಾಚರಣೆಗೆ ನಡೆಸಿದ್ದು ಬಹುತೇಕ ಯಶಸ್ವಿಯಾಗಿದ್ದು ಪೂರ್ಣಗೊಳ್ಳಲು ಕ್ಷಣಗಣನೆ ಶುರುವಾಗಿದೆ.

ಇಂದು (ಗುರುವಾರ) ಬೆಳಿಗ್ಗೆ 8 ಗಂಟೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.  ಸುರಂಗದಿಂದ ಹೊರಬರುವ ಅವರಿಗೆ ವೈದ್ಯಕೀಯ ನೆರವು ನೀಡಲು ಈಗಾಗಲೇ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಆಂಬ್ಯುಲೆನ್ಸ್‌ಗಳನ್ನು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ಬುಧವಾರ ವೇಗ ಪಡೆದುಕೊಂಡಿದೆ. ಸುರಂಗದ ಕುಸಿದ ಪ್ರದೇಶದಲ್ಲಿ ರಾಶಿ ರಾಶಿ ಬಿದ್ದಿದ್ದ ಕಲ್ಲುಮಣ್ಣುಗಳಿಂದ ಅಮೆರಿಕದ ಕೊರೆಯುವ ಯಂತ್ರ ಕೊರೆಯಲು ಆರಂಭಿಸಿತು. ಬುಧವಾರ ಮಧ್ಯಾಹ್ನದ ವೇಳೆಗೆ 45 ಮೀಟರ್‌ ಕೊರೆದಿದೆ. ಪ್ರತಿ 6 ಮೀಟರ್ ಉದ್ದ ಮತ್ತು 800 ಎಂಎಂ ವ್ಯಾಸದ ಇನ್ನೂ ಎರಡು ಉಕ್ಕಿನ ಪೈಪ್‌ಗಳನ್ನು ಸುರಂಗಕ್ಕೆ ಕಳುಹಿಸಲು ಸುಮಾರು 12 ಮೀಟರ್‌ಗಳಷ್ಟು ಅವಶೇಷಗಳನ್ನು ಅಗೆಯಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದೆಡೆ, ಉತ್ತರ ಕಾಶಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳನ್ನು ಅಲರ್ಟ್ ಮಾಡಲಾಗಿದೆ.  ಅವರಲ್ಲದೆ, ಸಂತ್ರಸ್ತ ಕಾರ್ಮಿಕರಿಗೆ ಏಮ್ಸ್ ಮತ್ತು ಋಷಿಕೇಶ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಆದರೆ ಅವಶೇಷಗಳ ಇನ್ನೊಂದು ಬದಿಯಲ್ಲಿ ಸಿಲುಕಿರುವ ಕಾರ್ಮಿಕರನ್ನು ತಲುಪಲು ಒಟ್ಟು 57 ಮೀಟರ್ ಕೊರೆಯಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಉತ್ತರಾಖಂಡದ ಸುರಂಗದ ರಕ್ಷಣೆಗಾಗಿ 21 ರಕ್ಷಣಾ ಸಿಬ್ಬಂದಿ ಆಮ್ಲಜನಕದ ಮಾಸ್ಕ್ ಗಳೊಂದಿಗೆ ಸುರಂಗವನ್ನು ಪ್ರವೇಶಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ನವೆಂಬರ್ 12 ರಂದು ಸಿಲ್ಕ್ಯಾರಾ ಸುರಂಗ ಹಠಾತ್ತನೆ ಕುಸಿದಿತ್ತು. ಈ ಘಟನೆಯಿಂದಾಗಿ 41 ಕಾರ್ಮಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ.  ಉತ್ತರ ಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗವನ್ನು ನಿರ್ಮಿಸಲಾಗುತ್ತಿದೆ. ಉತ್ತರ ಕಾಶಿ ಸುರಂಗದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಂದ ಕಾಲಕಾಲಕ್ಕೆ ಮಾಹಿತಿಯನ್ನು ಪಡೆಯುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment