Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RCB ಅನ್ ಬಾಕ್ಸ್ ಗೆ ಕ್ಷಣ ಗಣನೆ : ಯಾರೆಲ್ಲಾ ಗೆಸ್ಟ್ ಗಳು ಬರ್ತಿದ್ದಾರೆ..?

Facebook
Twitter
Telegram
WhatsApp

ಬೆಂಗಳೂರು: ಈ ಸಲ ಕಪ್ ಗೆಲ್ಲು ಉತ್ಸಾಹದಲ್ಲಿದ್ದಾರೆ ಆರ್ಸಿಬಿ ಅಭಿಮಾನಿಗಳು. ಈಗಾಗಲೇ ಮಹಿಳಾ ಅಭಿಮಾನಿಗಳು ಕಪ್ ಗೆದ್ದು ಸಂಭ್ರಮಿಸಿದ್ದಾರೆ. ಐಪಿಎಲ್ ನಲ್ಲೂ ಆರ್ಸಿಬಿ ಕಪ್ ಗೆಲ್ಲುವು ಭರವಸೆ ಇದೆ. ಅದಕ್ಕೆ ಮುನ್ನವಾಗಿ ಮೊದಲು ಹೆಸರು ಬದಲಾವಣೆ ಮಾಡಲಿದ್ದಾರೆ. RCB ಅನ್ ಬಾಕ್ಸ್ ಗೆ ಕ್ಷಣಗಣನೆ ಶುರುವಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉತ್ಸವ ಶುರುವಾಗಿದೆ. ಈ ಅನ್ ಬಾಕ್ಸ್ ಮಾಡಲು ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಕೂಡ ಬರ್ತಿದ್ದಾರೆ.

ಅನ್ ಬಾಕ್ಸ್ ಈವೆಂಟ್ ಈಗಾಗಲೇ ಶುರುವಾಗಿದ್ದು, ಜನರ ದಂಡು ಹರಿದು ಬರುತ್ತಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಆಗಿದ್ದು, ಅಭಿಮಾನಿಗಳಿಂದಾನೇ ಚಿನ್ನಸ್ವಾಮಿ ಕ್ರೀಡಾಂಗಣ ತುಂಬಿ ತುಳುಕುತ್ತಿದೆ. ಅನ್ ಬಾಕ್ಸ್ ಈವೆಂಟ್ ನಲ್ಲಿ ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

ಇಂದಿನ ಈವೆಂಟ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರ್ ಹೆಸರು ಕೂಡ ಬದಲಾಗಲಿದೆ. ಬೆಂಗಳೂರ್ ಹೋಗಿ ಬೆಂಗಳೂರು ಆಗುವ ಸಾಧ್ಯತೆ ಇದೆ. ಆರ್ಸಿಬಿ ಪ್ರಾಂಚೈಸಿಯ ಜೆರ್ಸಿ ಕೂಡ ಬದಲಾವಣೆಯಾಗಲಿದೆ. ಅಲನ್ ವಾಕರ್, ರಘು ದೀಕ್ಷಿತ್, ನೀತಿ ಮೋಹನ್ ಬ್ರೋಧಾ, ವಿ. ಜೋರ್ಡಿಂಡಿಯನ್, ಬರ್ಫಿ ಕಚ್ಚೇರಿ ಅವರ ಕಾರ್ಯಕ್ರಮ ನಡೆಯಲಿದೆ. ನಟ ರಿಷಬ್ ಶೆಟ್ಟಿ, ಶಿವರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರು ಭಾಗಿಯಾಗಲಿದ್ದಾರೆ.

ಈ ಮೊದಲೇ ಅಶ್ವಿನಿ ಪುನೀತ್ ರಾಜ್‍ಕುಮಾರ್, ರಿಷಭ್ ಶೆಟ್ಟಿ, ಶಿವಣ್ಣ ಎಲ್ಲರೂ ಆರ್ಸಿಬಿ ಹೆಸರು ಬದಲಾವಣೆಯ ಬಗ್ಗೆ ಮಾತನಾಡಿದ್ದರು. ಯಾವ ರೀತಿ ಬದಲಾಗಬಹುದು ಎಂಬ ಪ್ರಶ್ನೆವೆ ಇಂದು ಉತ್ತರ ಸಿಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!