Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಿವಿ ಸಾಗರ ಕೋಡಿ ಬೀಳಲು ಕ್ಷಣಗಣನೆ : ಬಾಗಿನಕ್ಕೂ ತಯಾರಿ ಸಚಿವ ಸುಧಾಕರ್ ಸಂತಸ

---Advertisement---

 

ಸುದ್ದಿಒನ್, ಚಿತ್ರದುರ್ಗ : ಹಿರಿಯೂರು ತಾಲೂಕಿನಲ್ಲಿರುವ ವಾಣಿ ವಿಲಾಸ ಜಲಾಶಯ ಕೋಡಿ ಬೀಳುವುದಕ್ಕೆ ಕೆಲವೇ ಗಂಟೆಗಳು ಬಾಕಿ ಇದೆ. ಈಗಾಗಲೇ 129.85 ನೀರು ಸಂಗ್ರಹವಾಗಿದೆ. ಕೋಡಿ ಬೀಳುವುದಕ್ಕೆ 130 ಅಡಿ ತುಂಬಿದರೆ ಸಾಕು. ಇನ್ನುಳಿದ ನೀರು ತುಂಬಲು ಕೆಲವೇ ಗಂಟೆಗಳು ಬೇಕಷ್ಟೇ ಮೂರನೇ ಬಾರಿ ವಾಣಿ ವಿಲಾಸ ಕೋಡಿ ಬೀಳುವುದನ್ನು ನೋಡಲು ಜನರು ಕಾತುರದಿಂದ ಕಾಯುತ್ತಿದ್ದಾರೆ.

ಈ ಸಂತಸವನ್ನು ಸಂಭ್ರಮಿಸಲು ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ತಯಾರಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಆಹ್ವಾನ ನೀಡಿದ್ದಾರೆ. ಜಿಲ್ಲಾಡಳಿತದಿಂದ ಕಾರ್ಯಕ್ರಮ ನಡೆಯುವ ಸ್ಥಳವನ್ನು ಪರಿಶೀಲನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದ್ದು, ಸುರಕ್ಷತೆಗಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೋಡಿ ಬೀಳುತ್ತಿರುವುದಕ್ಕೆ ಸಚಿವ ಡಿ.ಸುಧಾಕರ್ ಎಲ್ಲರಿಗಿಂತ ಹೆಚ್ಚಾಗಿ ಖುಷಿ ಪಡುತ್ತಿದ್ದಾರೆ. ಯಾಕಂದ್ರೆ 2016-18ರ ತನಕ ರಾಜ್ಯದಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ಉಂಟಾಗಿತ್ತು. ಈ ಪ್ರಕೃತಿ ವಿಕೋಪವನ್ನ ಡಿ ಸುಧಾಕರ್ ಅವರ ಮೇಲೆ ಹೊರಿಸಲಾಗಿತ್ತು. ಈ ಮೂಲಕ ಚುನಾವಣಾ ಲಾಭ ಮಾಡಿಕೊಳ್ಳಲಾಗಿತ್ತು. ಗಿಡ ಮರಗಳ ಒಣಗುವಿಕೆಯನ್ನು ಅಧಿಕಾರದಲ್ಲಿರುವವರ ಕಾಲ್ಗುಣಕ್ಕೆ ಹೋಲಿಕೆ ಮಾಡಲಾಗಿತ್ತು. ಅಂದು ಇದೆಲ್ಲದರ ಪರಿಣಾಮ ಸೋಲಾಗಿತ್ತು.

2023ರಲ್ಲಿ ಮತ್ತೆ ಗೆಲುವು ಕಂಡ ಸುಧಾಕರ್, ಈಗ ವಿವಿ ಸಾಗರ ನಾಲೆ ತುಂಬುವುದನ್ನು ಎದುರು ನೋಡುತ್ತಿದ್ದಾರೆ. ಅಂದು ಕಾಲ್ಗುಣದಿಂದ ಬರ ಬಂದಿದೆ ಎಂದವರಿಗೆ ಈ ಸಂಭ್ರಮ ತಿರುಗೇಟು ನೀಡಿದಂತಾಗಿದೆ. ಹೀಗಾಗಿ ವಿವಿ ಜಲಾಶಯದ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಸ್ವತಃ ಸುಧಾಕರ್ ಅವರೇ ಮುಂದೆ ನಿಂತು ನೋಡಿಕೊಳ್ಳುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...