ಸುದ್ದಿಒನ್, ಹಿರಿಯೂರು, ಅಕ್ಟೋಬರ್. 11 : ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮಳೆಯಾಗುತ್ತಿದ್ದು ಜೊತೆಗೆ ವಾಣಿವಿಲಾಸ ಜಲಾಶಯ ಮೇಲ್ಭಾಗದಲ್ಲಿ ಕೂಡ ಮಳೆ ಪ್ರಮಾಣ ಹೆಚ್ಚಿದ್ದು, ವಾಣಿ ವಿಲಾಸ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಅಕ್ಟೋಬರ್ 10ರಂದು ಜಲಾಶಯಕ್ಕೆ 1250 ಕ್ಯೂಸೆಕ್ ಒಳಹರಿವು ನೀರು ಹರಿದು ಬಂದಿದ್ದು, ಮರುದಿನ ಶನಿವಾರ ಬೆಳಗ್ಗೆ ಒಳಹರಿನ ಪ್ರಮಾಣದಲ್ಲಿ ಏಕಾಏಕಿ 2917 ಕ್ಯೂಸೆಕ್ ಒಳಹರಿವು ನೀರು ಹೆಚ್ಚಿದೆ. ಇದರಿಂದ ಶನಿವಾರಕ್ಕೆ ಪ್ರಸ್ತುತ ಜಲಾಶಯದಿಂದ ನೀರಿನ ಮಟ್ಟ 129.40 ಅಡಿ ತಲುಪಿದೆ. ಇದೇ ಪ್ರಮಾಣದಲ್ಲಿ ಒಳರಿವು ಮುಂದುವರೆದರೆ ಜಲಾಶಯ ಯಾವ ಕ್ಷಣದಲ್ಲಾದರೂ ಭರ್ತಿಯಾಗಿ ಕೊಡಿಬಿಳಬಹುದು. ವೇದಾವತಿ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆಯಿಂದ ಹಾಗೂ ಸುರಕ್ಷಿತ ಜಾಗಗಳಲ್ಲಿ ಇರುವಂತೆ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆಂದು ತಹಶೀಲ್ದಾರ್ ಎಂ. ಸಿದ್ದೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











