ವಿವಿ ಸಾಗರ ಕೋಡಿಗೆ ಕ್ಷಣಗಣನೆ, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಮನವಿ

1 Min Read

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 11 : ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮಳೆಯಾಗುತ್ತಿದ್ದು ಜೊತೆಗೆ ವಾಣಿವಿಲಾಸ ಜಲಾಶಯ ಮೇಲ್ಭಾಗದಲ್ಲಿ ಕೂಡ ಮಳೆ ಪ್ರಮಾಣ ಹೆಚ್ಚಿದ್ದು, ವಾಣಿ ವಿಲಾಸ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.

ಅಕ್ಟೋಬರ್ 10ರಂದು ಜಲಾಶಯಕ್ಕೆ 1250 ಕ್ಯೂಸೆಕ್ ಒಳಹರಿವು ನೀರು ಹರಿದು ಬಂದಿದ್ದು, ಮರುದಿನ ಶನಿವಾರ ಬೆಳಗ್ಗೆ ಒಳಹರಿನ ಪ್ರಮಾಣದಲ್ಲಿ ಏಕಾಏಕಿ 2917 ಕ್ಯೂಸೆಕ್ ಒಳಹರಿವು ನೀರು ಹೆಚ್ಚಿದೆ. ಇದರಿಂದ ಶನಿವಾರಕ್ಕೆ ಪ್ರಸ್ತುತ ಜಲಾಶಯದಿಂದ ನೀರಿನ ಮಟ್ಟ 129.40 ಅಡಿ ತಲುಪಿದೆ. ಇದೇ ಪ್ರಮಾಣದಲ್ಲಿ ಒಳರಿವು ಮುಂದುವರೆದರೆ ಜಲಾಶಯ ಯಾವ ಕ್ಷಣದಲ್ಲಾದರೂ ಭರ್ತಿಯಾಗಿ ಕೊಡಿಬಿಳಬಹುದು. ವೇದಾವತಿ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆಯಿಂದ ಹಾಗೂ ಸುರಕ್ಷಿತ ಜಾಗಗಳಲ್ಲಿ ಇರುವಂತೆ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆಂದು ತಹಶೀಲ್ದಾರ್ ಎಂ. ಸಿದ್ದೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article