ಚಳ್ಳಕೆರೆ, (ಏ.19): ತಾಲ್ಲೂಕಿನ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಏಣಿಕೆ ಕಾರ್ಯ ಆರಂಭವಾಗಿದ್ದು, ತಹಶೀಲ್ದಾರ್ ಎನ್.ರಘುಮೂರ್ತಿ, ದೇವಸ್ಥಾನದ ಆಡಳಿತಾಧಿಕಾರಿ ಗಂಗಾಧರಪ್ಪ, ಕಂದಾಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿ ಬೀಗ ತೆಗೆದು ಹಣ ಏಣಿಕೆ ಕಾರ್ಯ ಪ್ರಾರಂಭಿಸಿದರು.
ಕಳೆದ ಮಾರ್ಚ್ 20 ರಂದು ನಡೆದಿದ್ದ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ದರ್ಶನ ಪಡೆದಿದ್ದರು. ಈ ವೇಳೆ ಭಕ್ತರು ನೀಡಿರುವ ಕಾಣಿಕೆ ಹಣ ಎಣಿಕೆ ಕಾರ್ಯ ಇಂದು (ಏಪ್ರಿಲ್ 19) ಆರಂಭವಾಗಿದೆ.
ಬೆಳಗ್ಗೆ 9.30 ಕ್ಕೆ ಆರಂಭವಾದ ಹುಂಡಿ ಏಣಿಕೆ ಕಾರ್ಯ, ಹೊರಮಠದಲ್ಲಿ ಏಣಿಕೆ ನಂತರ, ಒಳಮಠದ ದೇವಸ್ಥಾನದಲ್ಲಿ ಇದ್ದ ಎಲ್ಲಾ ಹುಂಡಿಗಳನ್ನು ತೆರವು ಮಾಡಿ ಹುಂಡಿಗಳನ್ನು ಏಣಿಕೆ ಕಾರ್ಯ ಮಾಡಲಾಯುತು. ದೇವಸ್ಥಾನದಲ್ಲಿ ಸಿಸಿ ಕ್ಯಾಮರ ಹಾಗೂ ವಿಡಿಯೋ ಚಿತ್ರಕರಣದ ಮೂಲಕ ಹುಂಡಿ ಹಣ ತೆರೆಯಲಾಯುತು.
ಹಿರಿಯೂರು ದೇವಸ್ಥಾನದಲ್ಲಿ ಹುಂಡಿ ಹಣ ಕಳ್ಳತನಾದ ಹಿನ್ನೆಲೆಯಲ್ಲಿ ನಾಯಕಹಟ್ಟಿಯಲ್ಲಿ ಬಿಗಿ ಪೊಲೀಸ್ ಬಂದೊಬಸ್ತ್ ಏರ್ಪಡಿಸಲಾಗಿತ್ತು.
ಕಾಣಿಕೆ ಹುಂಡಿಯಲ್ಲಿ ಭಕ್ತರು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಪತ್ರಗಳ ಪತ್ರಗಳ ಬರೆದು ಪತ್ರಗಳನ್ನು ಹಾಕಲಾಗಿತ್ತು. ಇದರ ಜೊತೆಗೆ ಬೆಳ್ಳಿ ಪಾದುಕೆ, ತೊಟ್ಟಿಲು, ಇತರೆ ಬೆಳ್ಳಿ ವಸ್ತುಗಳನ್ನು ಹುಂಡಿಯೊಳಗೆ ಹಾಕಿದ್ದರು.
ಪಾಪಿಯಿಂದ ಪಾಮರರವರೆಗೂ ಅಭಿಷ್ಟಗಳನ್ನು ಈಡೇರಿಸುವಂತಹ ಮಹಾದೈವ ಹಾಗೂ ಮಾಡಿದಷ್ಟು ನೀಡು ಭಿಕ್ಷೆ ನೀಡುವಂತಹ ಕರುಣಾಮಯಿ ನಾಯಕನಟ್ಟಿ ತಿಪ್ಪೇರುದ್ರಸ್ವಾಮಿ.
ತಮ್ಮ ಇಷ್ಟಾರ್ಥವನ್ನು ನೆರವೇರಿಸಲು ಭಕ್ತರು ಅನೇಕ ಮನವಿಗಳು ಕಾಣಿಕೆ ಹುಂಡಿಯಲ್ಲಿ ಹಾಕಿದ್ದಾರೆ. ಹಲವಾರು ಭಕ್ತರು ಮದುವೆ, ನೌಎಕರಿ, ಆರ್ಥಿಕ ಸಂಕಷ್ಟ, ಸಂತಾನ, ಆರೋಗ್ಯ ಮುಂತಾದಂತಹ ಹಲವಾರು ಇಷ್ಟಾರ್ಥ ಈಡೇರಿಸುವಂತೆ ಮನವಿಗಳನ್ನು ಕಾಣಿಕೆ ಹುಂಡಿಗೆ ಸಲ್ಲಿಸಿದ್ದಾರೆ. ಸ್ವಾಮಿಯು ಎಲ್ಲರ ಕೋರಿಕೆಯನ್ನು ನೆರವೇರಿಸುತ್ತಾನೆಂಬ ಆಶಾಭಾವನೆ ಭಕ್ತರಲ್ಲಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…