Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಕೇಳಿದ್ದ ಹಾಸಿಗೆ, ತಲೆ ದಿಂಬಿಗೆ ಕೋರ್ಟ್ ನೋ ಪರ್ಮಿಷನ್..!

---Advertisement---

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿಗೆ ಜೈಲು ಸೇರಿರುವ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಸಾಕಷ್ಟು ಕಷ್ಟಪಡ್ತಾ ಇದ್ದಾರೆ. ತಲೆ ದಿಂಬು ಇಲ್ಲದೆ, ಹಾಸಿಗೆ ಇಲ್ಲದೆ ಮೈ ಕೈ ನೋವು ಹೆಚ್ಚಾಗುತ್ತಿದೆ. ಅದರಲ್ಲೂ ಬೆನ್ನು ನೋವು ಜಾಸ್ತಿಯಾಗಿದೆ. ಹೀಗಾಗಿ ದರ್ಶನ್ ಪರ ಅವರ ವಕೀಲರು ಕೋರ್ಟ್ ಗೆ ಈ ಸಂಬಂಧ ಅರ್ಜಿ ಸಲ್ಲಿಕೆ ಮಾಡಿದ್ದರು. ಆದ್ರೆ ಈಗ ಕೋರ್ಟ್ ಆ ಬೇಡಿಕೆಗೆ ಮನ್ನಣೆ ನೀಡಿಲ್ಲ.

ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಈ ಆದೇಶವನ್ನು ನೀಡಿದೆ. ತಿಂಗಳಿಗೊಮ್ಮೆ ಚಾದರ್, ಬಟ್ಟೆ ಒದಗಿಸಲು ಕೋರ್ಟ್ ಸೂಚನೆ ನೀಡಿದೆ. ಬೇರೆ ಬ್ಯಾರಕ್ ಗೆ ಶಿಫ್ಟ್ ಮಾಡುವ ಆಯ್ಕೆ ಜೈಲು ಅಧಿಕಾರಿಗಳಿಗೆ ನೀಡಿದೆ. ಸಾಧ್ಯವಾದರೆ ಬೇರೆ ಬ್ಯಾರಕ್ ಗೆ ಶಿಫ್ಟ್ ಮಾಡಲು ಸೂಚನೆ ನೀಡಿದ್ದು, ಅಕ್ಟೋಬರ್ 31ರಂದು ದೋಷಾರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ ತೆಗೆದುಕೊಂಡಿದೆ.

ಇನ್ನು ಆರೋಪಿಗಳ ಮೇಲೆ ದೋಷಾರೋಪ ಹೊರಿಸಲು ಸಿದ್ಧತೆ ನಡೆಸಿದೆ. ಅಕ್ಟೋಬರ್ 31ರಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳ ವಿರುದ್ಧವೂ ಯಾವ್ಯಾವ ಸೆಕ್ಷನ್ ಗಳ ಅಡಿ ಆರೋಪ ಹೊರಿಸಲಾಗುತ್ತೆ ಎನ್ನುವು್ಉ ಕೋರ್ಟ್ ತಿಳಿಸಲಿದೆ. ಅದರ ಆಧಾರದ ಮೇಲೆ ಮುಂದೆ ಕೋರ್ಟ್ ನಲ್ಲಿ ವಾದ ಪ್ರತಿವಾದ ನಡೆಯಲಿದೆ. ನಟ ದರ್ಶನ್ ವಿರುದ್ಧ ಕೊಲೆ, ಹಲ್ಲೆ, ಕಿಡ್ನ್ಯಾಪ್, ಸಾಜ್ಷಿ ನಾಶ ಸೇರಿದಮನತೆ ವಿವಿಧ ಆರೋಪಗಳನ್ನು ವಿವಿಧ ಸೆಕ್ಷನ್ ಗಳಡು ಹೊರಿಸುವ ಸಾಧ್ಯತೆ ಇದೆ. ಜೊತೆಗೆ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಎ5 ನಂದೀಶ್ ಅರ್ಜಿಯನ್ನು ಕೂಡ ಕೋರ್ಟ್ ವಜಾಗೊಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...