Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಮಂದಿಗೆ ಜಾಮೀನು ನೀಡಿದ ಕೋರ್ಟ್..!

---Advertisement---

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದ ದರ್ಶನ್, ಪವಿತ್ರಾಗೌಡ ಸೇರಿದಂತೆ ಇಂದು ಏಳು ಮಂದಿಗೆ ಕೋರ್ಟ್ ಜಾಮೀನು ನೀಡಿದೆ. ಇದರಿಂದ ಪವಿತ್ರಾ ಗೌಡಗೆ ಜೈಲಿನಿಂದ ರಿಲೀಫ್ ಸಿಕ್ಕಂತೆ ಆಗಿದೆ. ನಟ ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಈಗಾಗಲೇ ಮಧ್ಯಂತರ ಜಾಮೀನು ಪಡೆದಿದ್ದರು. ಈ ಮೂಲಕ ಇಂದು ರೆಗ್ಯುಲರ್ ಬೇಲ್ ಸಿಕ್ಕಿದ್ದು, ಖುಷಿಯಾಗಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಏಳು ಮಂದಿಗೆ ಜಾಮೀನು ಮಂಜೂರು ಮಾಡಿದೆ. ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಹಾಗೂ ಪ್ರದೂಶ್ ಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆಯೇ ಮೂವರಿಗೆ ಜಾಮೀನು ಮಂಜೂರಾಗಿತ್ತು. ಇಷ್ಟು ದಿನ ಜೈಲಿನಲ್ಲಿದ್ದವರೆಲ್ಲ ನಿರಾಳರಾಗಿದ್ದಾರೆ. ಪವಿತ್ರಾ ಗೌಡ ಬೇಲ್ ಗಾಗಿ ಸಾಕಷ್ಟು ಕಷ್ಟಪಟ್ಟಿದ್ದರು ಇದೀಗ ಜಾಮೀನು ಮಂಜೂರಾಗಿದೆ.

 

ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚುತ್ರದುರ್ಗದಿಂದ ಕರೆದುಕೊಂಡು ಬಂದು ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿತ್ತು. ಬಳಿಕ ಬೆಂಗಳೂರು ಪೊಲೀಸರು ಈ ಕೊಲೆಗೆ ಸಂಬಂಧಿಸಿದಂತೆ ಹದಿನೇಳು ಜನ ಆರೋಪಿಗಳನ್ನ ಬಂಧಿಸಲಾಗಿತ್ತು. ಕೇಸ್ ಹೈಕೋರ್ಟ್ ನಡೆಯುತ್ತಿತ್ತು. ಸರ್ಕಾರದ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸುತ್ತಿದ್ದರು. ಇದೀಗ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇಂದು ಮಧ್ಯಾಹ್ನದ ವೇಳೆ ಆದೇಶ ಹೊರಡಿಸಿರುವ ಕಾರಣ, ಜಾಮೀನು ಸಿಕ್ಕ ಆರೋಪಿಗಳೆಲ್ಲ ನಾಳೆ ರಿಲೀಸ್ ಆಗುವ ಸಾಧ್ಯತೆ ಇದೆ. ಪವಿತ್ರಾ ಗೌಡ ಮತ್ತು ಕುಟುಂಬಸ್ಥರಂತು ಮಗಳು ಹೊರಗೆ ಬರುತ್ತಿರುವುದಕ್ಕೆ ಸಂತಸಗೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment