ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಮಂದಿಗೆ ಜಾಮೀನು ನೀಡಿದ ಕೋರ್ಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದ ದರ್ಶನ್, ಪವಿತ್ರಾಗೌಡ ಸೇರಿದಂತೆ ಇಂದು ಏಳು ಮಂದಿಗೆ ಕೋರ್ಟ್ ಜಾಮೀನು ನೀಡಿದೆ. ಇದರಿಂದ ಪವಿತ್ರಾ ಗೌಡಗೆ ಜೈಲಿನಿಂದ ರಿಲೀಫ್ ಸಿಕ್ಕಂತೆ ಆಗಿದೆ. ನಟ ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಈಗಾಗಲೇ ಮಧ್ಯಂತರ ಜಾಮೀನು ಪಡೆದಿದ್ದರು. ಈ ಮೂಲಕ ಇಂದು ರೆಗ್ಯುಲರ್ ಬೇಲ್ ಸಿಕ್ಕಿದ್ದು, ಖುಷಿಯಾಗಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಏಳು ಮಂದಿಗೆ ಜಾಮೀನು ಮಂಜೂರು ಮಾಡಿದೆ. ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಹಾಗೂ ಪ್ರದೂಶ್ ಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆಯೇ ಮೂವರಿಗೆ ಜಾಮೀನು ಮಂಜೂರಾಗಿತ್ತು. ಇಷ್ಟು ದಿನ ಜೈಲಿನಲ್ಲಿದ್ದವರೆಲ್ಲ ನಿರಾಳರಾಗಿದ್ದಾರೆ. ಪವಿತ್ರಾ ಗೌಡ ಬೇಲ್ ಗಾಗಿ ಸಾಕಷ್ಟು ಕಷ್ಟಪಟ್ಟಿದ್ದರು ಇದೀಗ ಜಾಮೀನು ಮಂಜೂರಾಗಿದೆ.

 

ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚುತ್ರದುರ್ಗದಿಂದ ಕರೆದುಕೊಂಡು ಬಂದು ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿತ್ತು. ಬಳಿಕ ಬೆಂಗಳೂರು ಪೊಲೀಸರು ಈ ಕೊಲೆಗೆ ಸಂಬಂಧಿಸಿದಂತೆ ಹದಿನೇಳು ಜನ ಆರೋಪಿಗಳನ್ನ ಬಂಧಿಸಲಾಗಿತ್ತು. ಕೇಸ್ ಹೈಕೋರ್ಟ್ ನಡೆಯುತ್ತಿತ್ತು. ಸರ್ಕಾರದ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸುತ್ತಿದ್ದರು. ಇದೀಗ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇಂದು ಮಧ್ಯಾಹ್ನದ ವೇಳೆ ಆದೇಶ ಹೊರಡಿಸಿರುವ ಕಾರಣ, ಜಾಮೀನು ಸಿಕ್ಕ ಆರೋಪಿಗಳೆಲ್ಲ ನಾಳೆ ರಿಲೀಸ್ ಆಗುವ ಸಾಧ್ಯತೆ ಇದೆ. ಪವಿತ್ರಾ ಗೌಡ ಮತ್ತು ಕುಟುಂಬಸ್ಥರಂತು ಮಗಳು ಹೊರಗೆ ಬರುತ್ತಿರುವುದಕ್ಕೆ ಸಂತಸಗೊಂಡಿದ್ದಾರೆ.

suddionenews

Recent Posts

ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ

ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ, ಈ ರಾಶಿಗಳ ಮದುವೆಗೆ ತುಂಬಾ ಅಡಚಣೆ, ಭಾನುವಾರ ರಾಶಿ ಭವಿಷ್ಯ 23 ಫೆಬ್ರವರಿ…

1 hour ago

ಚಿತ್ರದುರ್ಗ : ನಾಲ್ವರು ಶ್ರೀಗಂಧದ ಕಳ್ಳರ ಬಂಧನ : 7.78 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ

    ಸುದ್ದಿಒನ್, ಹಿರಿಯೂರು, ಫೆಬ್ರವರಿ. 22 : ಅಬ್ಬಿನಹೊಳೆ ಮತ್ತು ಹೊಸದುರ್ಗ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀಗಂಧ…

9 hours ago

ಮಹಾರಾಷ್ಟ್ರದ ಸಾರಿಗೆ ಬಸ್ ಮತ್ತು ನಿರ್ವಾಹಕನಿಗೆ ಮಸಿ : ಚಿತ್ರದುರ್ಗದಲ್ಲಿ 8 ಮಂದಿ ಪೊಲೀಸರ ವಶಕ್ಕೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 22 : ಮಹಾರಾಷ್ಟ್ರದಲ್ಲಿ ರಾಜ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನ ನಿರ್ವಾಹಕನಿಗೆ ಮರಾಠಿಗರು ಕನ್ನಡದಲ್ಲಿ ಟಿಕೆಟ್ ಕೇಳಿದ…

11 hours ago

ಗುಣಮಟ್ಟದ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರದ ಸಂಕಲ್ಪ : ಸಚಿವ ಡಿ.ಸುಧಾಕರ್

ಚಿತ್ರದುರ್ಗ. ಫೆ.22: ರಾಜ್ಯದ ರೈತರಿಗೆ ಗುಣಮಟ್ಟದ ನಿರಂತರ ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಯೋಜನಾ ಮತ್ತು…

12 hours ago

ಇ-ಖಾತಾ ಅಭಿಯಾನಕ್ಕೆ ಸಚಿವ ಡಿ.ಸುಧಾಕರ್ ಚಾಲನೆ

ಚಿತ್ರದುರ್ಗ. ಫೆ.22: ಇ-ಖಾತಾ ಅಭಿಯಾನ ಮತ್ತು ಸಹಾಯವಾಣಿ ಕೇಂದ್ರಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

12 hours ago