Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ – ಪವಿತ್ರಾ ಗೌಡ ವಿಚಾರಣೆ ಮುಂದೂಡಿದ ಕೋರ್ಟ್

---Advertisement---

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಕಳೆದ ವಾರವಷ್ಟೇ ಪೊಲೀಸರು ಕೋರ್ಟ್ ಗೆ ದೋಷಾರೋಪವನ್ನು ಹೊರಿಸಿದ್ದರು. ಆ ಸಂಬಂಧ ಕೋರ್ಟ್ ನಲ್ಲಿ ವಾದ ಪ್ರತಿವಾದವೂ ಆರಂಭವಾಗಿತ್ತು. ದರ್ಶನ್, ಪೊಲೀಸರ ದೋಷಾರೋಪವನ್ನು ತಳ್ಳಿ ಹಾಕಿದ್ದರು‌. ಇಂದು ಕೋರ್ಟ್ ನಲ್ಲಿ ಮತ್ತೆ ವಿಚಾರಣೆ ಆರಂಭವಾಗಿತ್ತು. ಇದೀಗ ಇಂದು ಮತ್ತೆ ಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ಇಂದು ಕೋರ್ಟ್ ನಲ್ಲಿ ವಿಚಾರಣೆ ಆರಂಭವಾದಾಗ ಆರೋಪಿಗಳ ಪರ ವಕೀಲರು ಈ ಕೇಸಲ್ಲಿ ಸಾವಿರ ಪುಟಗಳ ದಾಖಲಿಗಳು ಇದಾವೆ. ಇವುಗಳನ್ನೆಲ್ಲ ಅಧ್ಯಯನ ಮಾಡಿ. ವಿಚಾರಣೆಗೆ ಸಿದ್ಧರಾಗಲು ತಮಗೆ ಕಾಲಾವಕಾಶ ಬೇಕೆಂದು ಕೋರ್ಟ್ ಗೆ ಮನವಿ ಮಾಡಿದ್ದರು. ತಮಗೆ ವಿಚಾರಣೆಗೆ ಸಿದ್ಧರಾಗಿ ವಾದ ಮಂಡನೆ ಮಾಡುವುದಕ್ಕೆ 15 ದಿನಗಳ ಕಾಲಾವಕಾಶ ಬೇಕು ಎಂದು ಕೋರ್ಟ್ ಗೆ ಮನವಿ ಮಾಡಿಕೊಂಡ ಬೆನ್ನಲ್ಲೇ 64ನೇ ಸಿಸಿಹೆಚ್ ಕೋರ್ಟ್ ವಿಚಾರಣೆಯನ್ನು ನವೆಂಬರ್ 19ಕ್ಕೆ ಮುಂದೂಡಿಕೆ ಮಾಡಿದೆ.

ಈಗಾಗಲೇ ಪ್ರಾಸಿಕ್ಯೂಷನ್ ಪರ ವಕೀಕರಾದ ಪ್ರಸನ್ನ ಕುಮಾರ್ ಅವರು, ಆರೋಪಿಗಳ ಪರ ವಕೀಲರು ಬೇಕಂತನೇ ವಿಚಾರಣೆಯನ್ನು ತಡ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ 6 ತಿಂಗಳ ಒಳಗೆ ವಿಚಾರಣೆಯನ್ನು ಪೂರ್ಣಗೊಳಿಸಲು ಹೇಳಿದೆ. ಆದರೆ ಆರೋಪಿಗಳ ಪರ ವಕೀಲರು ಅಧ್ಯಯನ ಮಾಡುವುದಕ್ಕೆ ಸಮಯಾವಕಾಶ ಕೇಳಿದ್ದಾರೆ. ಕೋರ್ಟ್ ಈ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಇದರ ನಡುವೆಯೇ ದರ್ಶನ್ ಆಪ್ತ ಧನ್ವೀರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌. ಪರಪ್ಪನ ಅಗ್ರಹಾರದ ವಿಡಿಯೋಗೂ ಧನ್ವೀರ್ ಗೂ ಸಂಬಂಧ ಇದ್ಯಾ ಎಂಬುದನ್ನ ವಿಚಾರಿಸಿ, ಕಳುಹಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now