ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಭವಾನಿ ರೇವಣ್ಣ ಇಂದು ಹೊಳೆನರಸೀಪುರದ ತಮ್ಮ ಸ್ವಗೃಹಕ್ಕೆ ಬಂದಿದ್ದಾರೆ. ಅವರು ಬರುತ್ತಿದ್ದಂತೆ ಹೂಗಳ ಮಳೆ ಸುರಿಸಿ ಸ್ಚಾಗತಕೋರಿದ್ದಾರೆ. ಅವರ ಅಭಿಮಾನಿಗಳು ಖುಷಿಯಿಂದ ಬರ ಮಾಡಿಕೊಂಡಿದ್ದಾರೆ. ಇಷ್ಟು ದಿನ ಹೊಳೆನರಸೀಪುರಕ್ಕೆ ಕೋರ್ಟ್ ಭವಾನಿ ಅವರ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು. ಇದೀಗ ಶುಕ್ರವಾರ ಆ ನಿರ್ಬಂಧವನ್ನು ತೆರವುಗೊಳಿಸಿದೆ. ಹೀಗಾಗಿ ತಮ್ಮ ಸ್ವಗೃಹಕ್ಕೆ ಹೋಗಿದ್ದಾರೆ.
ಈ ವೇಳೆ ಮಾತನಾಡಿದ ಭವಾನಿ ರೇವಣ್ಣ, ನಾನು ಬರ್ತಿರೋ ವಿಚಾರವನ್ನ ಯಾರಿಗೂ ತಿಳಿಸಿರಲಿಲ್ಲ. ಆದರೂ ಸಾಕಷ್ಡು ಜನ ಬಂದಿದ್ದಾರೆ. ಶುಕ್ರವಾರ ನನಗೆ ಕೋರ್ಟ್ ನಿಂದ ರಿಲ್ಯಾಕ್ಸ್ ಸಿಕ್ಕಿದ ಬಳಿಕ ಸಾಕಷ್ಟು ಜನ ಫೋನ್ ಮಾಡಿದ್ದರು. ಆದರೂ ಬರುವ ವಿಚಾರ ಯಾರಿಗೂ ತಿಳಿಸಿರಲಿಲ್ಲ. ಆದರೂ ಸಾಕಷ್ಟು ಜನ ಬಂದಿದ್ದಾರೆ. ಇಷ್ಟೊಂದು ಜನರನ್ನು ನೋಡಿ ನನಗೆ ಮುಜುಗರವಾಯ್ತು ಎಂದಿದ್ದಾರೆ ಭವಾನಿ ರೇವಣ್ಣ.
ಹಿರಿಸಾವೆಯಿಂದಾನೂ ಸಾಕಷ್ಟು ಜನ ನನ್ನ ಜೊತೆಗೆ ಬಂದಿದ್ದಾರೆ. ನಾನೀಗ ರಾಜಕೀಯದ ಬಗ್ಗೆ ಮಾತನಾಡಲ್ಲ. ನಾನು ಜನರಿಂದ ಯಾಕೆ ದೂರ ಉಳಿಯಲಿ..? ಅವರು ನನಗಾಗಿ ಸಾಕಷ್ಡು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರೊಟ್ಟಿಗೆ ಇದ್ದು ನಾನು ಒಂದಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತೇನೆ. ತುಂಬಾ ಸಂತೋಷವಾಗಿದೆ. ಜನರಿಗೆ ನಾನು ಋಣಿಯಾಗಿರ್ತೇನೆ. ದೇವೇಗೌಡರ ಕಾಲದಿಂದಾನೂ ಜನರು ಸಹಕಾರ ನೀಡಿದ್ದಾರೆ. ಹಾಗಾಗಿ ನನ್ನ ಕೈಲಾದಷ್ಟು ಸಹಾಯವನ್ನು ಅವರಿಗೆ ಮಾಡುತ್ತೇನೆ. ಹಾಸನದಿಂದ ಯಾವುದೇ ಕಾರಣಕ್ಕೂ ದೂರ ಉಳಿಯುವುದಿಲ್ಲ. ನಾನು ಇಲ್ಲಿಗೆ ಬಾರದೆ ಹೋದರು ಜನ ಅಲ್ಲಿಗೆ ಬಂದು ಮಾತನಾಡಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್