Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೋರ್ಟ್ ನಿರ್ಬಂಧ ಸಡಿಲಿಕೆ ; ಊರಿಗೆ ಬಂದ ಭವಾನಿ ರೇವಣ್ಣರಿಗೆ ಹೂವಿನ ಸ್ವಾಗತ.. ನನಗೆ ಮುಜುಗರವಾಗುತ್ತೆ ಅಂದಿದ್ಯಾಕೆ ದೊಡ್ಡಗೌಡ್ರ ಸೊಸೆ..?

---Advertisement---

ಭವಾನಿ ರೇವಣ್ಣ ಇಂದು ಹೊಳೆನರಸೀಪುರದ ತಮ್ಮ ಸ್ವಗೃಹಕ್ಕೆ ಬಂದಿದ್ದಾರೆ. ಅವರು ಬರುತ್ತಿದ್ದಂತೆ ಹೂಗಳ ಮಳೆ ಸುರಿಸಿ ಸ್ಚಾಗತಕೋರಿದ್ದಾರೆ. ಅವರ ಅಭಿಮಾನಿಗಳು ಖುಷಿಯಿಂದ ಬರ ಮಾಡಿಕೊಂಡಿದ್ದಾರೆ. ಇಷ್ಟು ದಿನ ಹೊಳೆನರಸೀಪುರಕ್ಕೆ ಕೋರ್ಟ್ ಭವಾನಿ ಅವರ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು. ಇದೀಗ ಶುಕ್ರವಾರ ಆ ನಿರ್ಬಂಧವನ್ನು ತೆರವುಗೊಳಿಸಿದೆ. ಹೀಗಾಗಿ ತಮ್ಮ ಸ್ವಗೃಹಕ್ಕೆ ಹೋಗಿದ್ದಾರೆ.

ಈ ವೇಳೆ ಮಾತನಾಡಿದ ಭವಾನಿ ರೇವಣ್ಣ, ನಾನು ಬರ್ತಿರೋ ವಿಚಾರವನ್ನ ಯಾರಿಗೂ ತಿಳಿಸಿರಲಿಲ್ಲ. ಆದರೂ ಸಾಕಷ್ಡು ಜನ ಬಂದಿದ್ದಾರೆ. ಶುಕ್ರವಾರ ನನಗೆ ಕೋರ್ಟ್ ನಿಂದ ರಿಲ್ಯಾಕ್ಸ್ ಸಿಕ್ಕಿದ ಬಳಿಕ ಸಾಕಷ್ಟು ಜನ ಫೋನ್ ಮಾಡಿದ್ದರು. ಆದರೂ ಬರುವ ವಿಚಾರ ಯಾರಿಗೂ ತಿಳಿಸಿರಲಿಲ್ಲ. ಆದರೂ ಸಾಕಷ್ಟು ಜನ ಬಂದಿದ್ದಾರೆ. ಇಷ್ಟೊಂದು ಜನರನ್ನು ನೋಡಿ ನನಗೆ ಮುಜುಗರವಾಯ್ತು ಎಂದಿದ್ದಾರೆ ಭವಾನಿ ರೇವಣ್ಣ.

ಹಿರಿಸಾವೆಯಿಂದಾನೂ ಸಾಕಷ್ಟು ಜನ ನನ್ನ ಜೊತೆಗೆ ಬಂದಿದ್ದಾರೆ. ನಾನೀಗ ರಾಜಕೀಯದ ಬಗ್ಗೆ ಮಾತನಾಡಲ್ಲ. ನಾನು ಜನರಿಂದ ಯಾಕೆ ದೂರ ಉಳಿಯಲಿ..? ಅವರು ನನಗಾಗಿ ಸಾಕಷ್ಡು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರೊಟ್ಟಿಗೆ ಇದ್ದು ನಾನು ಒಂದಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತೇನೆ. ತುಂಬಾ ಸಂತೋಷವಾಗಿದೆ. ಜನರಿಗೆ ನಾನು ಋಣಿಯಾಗಿರ್ತೇನೆ. ದೇವೇಗೌಡರ ಕಾಲದಿಂದಾನೂ ಜನರು ಸಹಕಾರ ನೀಡಿದ್ದಾರೆ. ಹಾಗಾಗಿ ನನ್ನ ಕೈಲಾದಷ್ಟು ಸಹಾಯವನ್ನು ಅವರಿಗೆ ಮಾಡುತ್ತೇನೆ. ಹಾಸನದಿಂದ ಯಾವುದೇ ಕಾರಣಕ್ಕೂ ದೂರ ಉಳಿಯುವುದಿಲ್ಲ. ನಾನು ಇಲ್ಲಿಗೆ ಬಾರದೆ ಹೋದರು ಜನ ಅಲ್ಲಿಗೆ ಬಂದು ಮಾತನಾಡಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment