ಭವಾನಿ ರೇವಣ್ಣ ಇಂದು ಹೊಳೆನರಸೀಪುರದ ತಮ್ಮ ಸ್ವಗೃಹಕ್ಕೆ ಬಂದಿದ್ದಾರೆ. ಅವರು ಬರುತ್ತಿದ್ದಂತೆ ಹೂಗಳ ಮಳೆ ಸುರಿಸಿ ಸ್ಚಾಗತಕೋರಿದ್ದಾರೆ. ಅವರ ಅಭಿಮಾನಿಗಳು ಖುಷಿಯಿಂದ ಬರ ಮಾಡಿಕೊಂಡಿದ್ದಾರೆ. ಇಷ್ಟು ದಿನ ಹೊಳೆನರಸೀಪುರಕ್ಕೆ ಕೋರ್ಟ್ ಭವಾನಿ ಅವರ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು. ಇದೀಗ ಶುಕ್ರವಾರ ಆ ನಿರ್ಬಂಧವನ್ನು ತೆರವುಗೊಳಿಸಿದೆ. ಹೀಗಾಗಿ ತಮ್ಮ ಸ್ವಗೃಹಕ್ಕೆ ಹೋಗಿದ್ದಾರೆ.
ಈ ವೇಳೆ ಮಾತನಾಡಿದ ಭವಾನಿ ರೇವಣ್ಣ, ನಾನು ಬರ್ತಿರೋ ವಿಚಾರವನ್ನ ಯಾರಿಗೂ ತಿಳಿಸಿರಲಿಲ್ಲ. ಆದರೂ ಸಾಕಷ್ಡು ಜನ ಬಂದಿದ್ದಾರೆ. ಶುಕ್ರವಾರ ನನಗೆ ಕೋರ್ಟ್ ನಿಂದ ರಿಲ್ಯಾಕ್ಸ್ ಸಿಕ್ಕಿದ ಬಳಿಕ ಸಾಕಷ್ಟು ಜನ ಫೋನ್ ಮಾಡಿದ್ದರು. ಆದರೂ ಬರುವ ವಿಚಾರ ಯಾರಿಗೂ ತಿಳಿಸಿರಲಿಲ್ಲ. ಆದರೂ ಸಾಕಷ್ಟು ಜನ ಬಂದಿದ್ದಾರೆ. ಇಷ್ಟೊಂದು ಜನರನ್ನು ನೋಡಿ ನನಗೆ ಮುಜುಗರವಾಯ್ತು ಎಂದಿದ್ದಾರೆ ಭವಾನಿ ರೇವಣ್ಣ.
ಹಿರಿಸಾವೆಯಿಂದಾನೂ ಸಾಕಷ್ಟು ಜನ ನನ್ನ ಜೊತೆಗೆ ಬಂದಿದ್ದಾರೆ. ನಾನೀಗ ರಾಜಕೀಯದ ಬಗ್ಗೆ ಮಾತನಾಡಲ್ಲ. ನಾನು ಜನರಿಂದ ಯಾಕೆ ದೂರ ಉಳಿಯಲಿ..? ಅವರು ನನಗಾಗಿ ಸಾಕಷ್ಡು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರೊಟ್ಟಿಗೆ ಇದ್ದು ನಾನು ಒಂದಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತೇನೆ. ತುಂಬಾ ಸಂತೋಷವಾಗಿದೆ. ಜನರಿಗೆ ನಾನು ಋಣಿಯಾಗಿರ್ತೇನೆ. ದೇವೇಗೌಡರ ಕಾಲದಿಂದಾನೂ ಜನರು ಸಹಕಾರ ನೀಡಿದ್ದಾರೆ. ಹಾಗಾಗಿ ನನ್ನ ಕೈಲಾದಷ್ಟು ಸಹಾಯವನ್ನು ಅವರಿಗೆ ಮಾಡುತ್ತೇನೆ. ಹಾಸನದಿಂದ ಯಾವುದೇ ಕಾರಣಕ್ಕೂ ದೂರ ಉಳಿಯುವುದಿಲ್ಲ. ನಾನು ಇಲ್ಲಿಗೆ ಬಾರದೆ ಹೋದರು ಜನ ಅಲ್ಲಿಗೆ ಬಂದು ಮಾತನಾಡಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 12…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏಪ್ರಿಲ್. 12…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಚಿತ್ರದುರ್ಗ ಏ. 12…
ಬೆಂಗಳೂರು; ಕಳೆದ ಕೆಲವು ವರ್ಷಗಳಿಂದಾನೂ ಡಿಜಿಟಲ್ ಪೇಮೆಂಟ್ ಅನ್ನೇ ಜನ ಅನುಸರಿಸುತ್ತಿದ್ದಾರೆ. ಸಣ್ಣಪುಟ್ಟ ವ್ಯವಹಾರಕ್ಕೂ ಜನರ ಬಳಿ ಕ್ಯಾಶ್…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 12 : ತಾಲೂಕಿನ ಚಿಕ್ಕಪ್ಪನಹಳ್ಳಿ ಗ್ರಾಮದ ಶ್ರೀಗುರು ಕೊಟ್ರ ಸ್ವಾಮಿ ರಥೋತ್ಸವ ಏಪ್ರಿಲ್ 15…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.…