Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿಗೆ ಕೋರ್ಟ್ ರಿಲೀಫ್ ಕೊಟ್ಟಿಲ್ಲ.. ಇವರೇ ತೆಗೆದುಕೊಂಡಿದ್ದಾರೆ : ಕುಮಾರಸ್ವಾಮಿ

---Advertisement---

 

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಡಿಕೆಶಿಗೆ ಹೈಕೋರ್ಟ್ ರಿಲೀಫ್ ನೀಡಿಲ್ಲ. ಇವರೇ ತೆಗೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಗ್ಯಾರಂಟಿ ಕಾರ್ಯಕ್ರಮದ ಮೂಲಕ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಬಿಡುತ್ತೀವಿ ಎಂದುಕೊಂಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಕೇಸ್ ಗಳನ್ನು ಮುಚ್ಚಿ ಹಾಕಬಹುದು ಎಂದು ಐದಾರು ತಿಂಗಳು ಮುಂದೂಡಿದ್ದಾರೆ. ಇದೆಲ್ಲಾ ತಂತ್ರಗಾರಿಕೆ ಅಷ್ಟೇ ಎಂದಿರುವ ಕುಮಾರಸ್ವಾಮಿ, ಇದೆ ವೇಳೆ ಸಿದ್ದರಾಮಯ್ಯ ವಿರುದ್ಧವೂ ಕಿಡಿಕಾರಿದ್ದಾರೆ. ಅವರು ದೊಡ್ಡ ವಕೀಲರು ಎಂಬುದು ನನಗೂ ಗೊತ್ತು. ಇವರೊಬ್ಬರೇ ಕಾನೂನು ತಿಳಿದುಕೊಂಡಿದ್ದಾರೆ. ಅದಕ್ಕೆ ಅರ್ಕಾವತಿ ಡಿನೋಟಿಫೈ ತೆಗೆದು ರಿಡೋ ಮಾಡಿದ್ರಿ. ಕೆಂಪಣ್ಣನ ಆಯೋಗ ಮಾಡಿ ಉಳಿದುಕೊಂಡ್ರಲ್ಲ. ಆ ರೀತಿಯ ವಕೀಲರು ಇವರು ಎಂದು ಕಿಡಿಕಾರಿದ್ದಾರೆ.

ಆ ವಕೀಲ ವೃತ್ತಿ ಮಾಡಿದ್ದರಲ್ಲಿ ಇಬ್ಬರು ಬುದ್ದಿವಂತರಿದ್ದಾರೆ. ಎಸಿಬಿ ರಚನೆ ಮಾಡಿ, ಇವರ ಮೇಲೆ‌ ಬಂದಂತ ಕೇಸ್ ಗಳನ್ನೆಲ್ಲಾ ಮುಚ್ಚಿ ಹಾಕಿಕೊಂಡಿದ್ದಾರೆ. ನಾನು ಸಿಎಂ ಆಗಿದ್ದಾಗ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಹೋರಾಟ ಮಾಡಿದ್ದೆ. ನನ್ನ ಮೇಲೆ ಇವರ ಸರ್ಕಾರದ 15 ಕೇಸ್ ಇತ್ತಲ್ಲ, ನಾನು ಆಗ ಈ ರೀತಿ ನಡೆದುಕೊಂಡಿದ್ದೀನಾ. ನಾನು ಎರಡನೇ ಬಾರಿಗೆ ಸಿಎಂ ಆಗಿದ್ದಾಗ ಕೇಸ್ ಮುಚ್ಚಿ ಹಾಕಿದ್ನಾ..? ಅವರಿಗೂ ನಮಗೂ ಇರುವುದು ವ್ಯತ್ಯಾಸ ಇಷ್ಟೇ. ಜನಸಾಮಾನ್ಯರಿಗೆ ಒಂದು ನ್ಯಾಯಾ.. ಇವರಿಗೆ ಒಂದು ನ್ಯಾಯಾನ ಎಂದು ಪ್ರಶ್ನೆ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...