Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿಗೆ ಕೋರ್ಟ್ ರಿಲೀಫ್ ಕೊಟ್ಟಿಲ್ಲ.. ಇವರೇ ತೆಗೆದುಕೊಂಡಿದ್ದಾರೆ : ಕುಮಾರಸ್ವಾಮಿ

Facebook
Twitter
Telegram
WhatsApp

 

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಡಿಕೆಶಿಗೆ ಹೈಕೋರ್ಟ್ ರಿಲೀಫ್ ನೀಡಿಲ್ಲ. ಇವರೇ ತೆಗೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಗ್ಯಾರಂಟಿ ಕಾರ್ಯಕ್ರಮದ ಮೂಲಕ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಬಿಡುತ್ತೀವಿ ಎಂದುಕೊಂಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಕೇಸ್ ಗಳನ್ನು ಮುಚ್ಚಿ ಹಾಕಬಹುದು ಎಂದು ಐದಾರು ತಿಂಗಳು ಮುಂದೂಡಿದ್ದಾರೆ. ಇದೆಲ್ಲಾ ತಂತ್ರಗಾರಿಕೆ ಅಷ್ಟೇ ಎಂದಿರುವ ಕುಮಾರಸ್ವಾಮಿ, ಇದೆ ವೇಳೆ ಸಿದ್ದರಾಮಯ್ಯ ವಿರುದ್ಧವೂ ಕಿಡಿಕಾರಿದ್ದಾರೆ. ಅವರು ದೊಡ್ಡ ವಕೀಲರು ಎಂಬುದು ನನಗೂ ಗೊತ್ತು. ಇವರೊಬ್ಬರೇ ಕಾನೂನು ತಿಳಿದುಕೊಂಡಿದ್ದಾರೆ. ಅದಕ್ಕೆ ಅರ್ಕಾವತಿ ಡಿನೋಟಿಫೈ ತೆಗೆದು ರಿಡೋ ಮಾಡಿದ್ರಿ. ಕೆಂಪಣ್ಣನ ಆಯೋಗ ಮಾಡಿ ಉಳಿದುಕೊಂಡ್ರಲ್ಲ. ಆ ರೀತಿಯ ವಕೀಲರು ಇವರು ಎಂದು ಕಿಡಿಕಾರಿದ್ದಾರೆ.

ಆ ವಕೀಲ ವೃತ್ತಿ ಮಾಡಿದ್ದರಲ್ಲಿ ಇಬ್ಬರು ಬುದ್ದಿವಂತರಿದ್ದಾರೆ. ಎಸಿಬಿ ರಚನೆ ಮಾಡಿ, ಇವರ ಮೇಲೆ‌ ಬಂದಂತ ಕೇಸ್ ಗಳನ್ನೆಲ್ಲಾ ಮುಚ್ಚಿ ಹಾಕಿಕೊಂಡಿದ್ದಾರೆ. ನಾನು ಸಿಎಂ ಆಗಿದ್ದಾಗ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಹೋರಾಟ ಮಾಡಿದ್ದೆ. ನನ್ನ ಮೇಲೆ ಇವರ ಸರ್ಕಾರದ 15 ಕೇಸ್ ಇತ್ತಲ್ಲ, ನಾನು ಆಗ ಈ ರೀತಿ ನಡೆದುಕೊಂಡಿದ್ದೀನಾ. ನಾನು ಎರಡನೇ ಬಾರಿಗೆ ಸಿಎಂ ಆಗಿದ್ದಾಗ ಕೇಸ್ ಮುಚ್ಚಿ ಹಾಕಿದ್ನಾ..? ಅವರಿಗೂ ನಮಗೂ ಇರುವುದು ವ್ಯತ್ಯಾಸ ಇಷ್ಟೇ. ಜನಸಾಮಾನ್ಯರಿಗೆ ಒಂದು ನ್ಯಾಯಾ.. ಇವರಿಗೆ ಒಂದು ನ್ಯಾಯಾನ ಎಂದು ಪ್ರಶ್ನೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!