Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಾಮೀನು ನಿರೀಕ್ಷೆಯಲ್ಲಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಕೋರ್ಟ್ ಶಾಕ್

---Advertisement---

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದ ತೀರ್ಪು ಭಾರಿ ನಿರಾಶೆ ಉಂಟುಮಾಡಿದೆ. ಕಳೆದ ಕೆಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಮಲ್ಲಿಕಾರ್ಜುನ ಮುತ್ಯಾ, ತನ್ನ ಬಿಡುಗಡೆಗಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು.

ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಮುತ್ಯಾ ಸದ್ಯಕ್ಕೆ ಜೈಲಿನಲ್ಲೇ ಉಳಿಯುವಂತಾಗಿದೆ.
ಜಾಮೀನು ಸಿಗುವ ಭರವಸೆಯಲ್ಲಿದ್ದ ಮುತ್ಯಾ ಮತ್ತು ಆತನ ಭಕ್ತರಿಗೆ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು ಜಾಮೀನು ನಿರಾಕರಿಸುವ ಮೂಲಕ ಶಾಕ್ ನೀಡಿದೆ.

ಅಪ್ರಾಪ್ತ ಬಾಲಕಿಯೊಂದಿಗೆ ನಡೆಸಿರುವ ಅನುಚಿತ ವರ್ತನೆಯು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆರೋಪಿಯು ಪ್ರಭಾವಿಯಾಗಿದ್ದು, ಜಾಮೀನಿನ ಮೇಲೆ ಹೊರಬಂದಲ್ಲಿ ಸಾಕ್ಷ್ಯನಾಶ ಮಾಡುವ ಅಥವಾ ಸಂತ್ರಸ್ತೆಯ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ’ ಎಂದು ಸರ್ಕಾರಿ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now