ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕೊರೊನಾ ಜೂನಿಯರ್ ತಳಿ ಈಗಾಗಲೇ ರಾಜ್ಯದಲ್ಲಿ ಆತಂಕ ಸೃಷ್ಟಿ ಮಾಡಿದೆ. ಚಳಿಯ ವಾತವಾರಣದ ಜೊತೆಗೆ ವೈರಸ್ ಕಾಟವೂ ಜನರನ್ನು ಭಯಗೊಳಿಸಿದೆ. ಪ್ರತಿದಿನ ಕೊರೊನಾ ಕೇಸ್ ಗಳು ಒಂದೊಂದೆ ಏರಿಕೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. ಜೊತೆಗೆ ಇಂದು 3 ಜನ ಸಾವನ್ನಪ್ಪಿರುವ ವರದಿ ಆಗಿದೆ.
ಆರೋಗ್ಯ ಇಲಾಖೆ ಕೊರೊನಾ ಮಾಹಿತಿ ನೀಡಿದ್ದು, 2072 ಜನರಿಗೆ RTPS ಟೆಸ್ಟ್ ಮಾಡಲಾಗಿದೆ. 1083 ಜನರಿಗೆ RAT ಟೆಸ್ಟ್ ಕೂಡ ಮಾಡಲಾಗಿದೆ. ಇದರಲ್ಲಿ 125 ಜನರಿಗೆ ಪಾಸಿಟಿವ್ ಎಂದು ದೃಢಪಟ್ಟಿದೆ.
ರಾಜ್ಯದಲ್ಲಿ ಒಟ್ಟು 436 ಆಕ್ಟೀವ್ ಕೇಸ್ ಗಳಿದ್ದು, 400 ಜನ ಹೋಮ್ ಐಸೋಲೇಷನ್ ಆಗಿದ್ದಾರೆ. 7 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 36 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನೇ ದಿನೇ ಕೇಸ್ ಗಳ ಹೆಚ್ಚಳವೂ ಜಾಸ್ತಿಯಾಗುತ್ತಿದೆ. ಕೊರೊನಾದಿಂದ ಸಾವು ಕೂಡ ಸಂಭವಿಸುತ್ತಿದೆ. ಹೀಗಾಗಿ ಜನ ಕೂಡ ಎಚ್ಚರದಿಂದ ಇರಬೇಕಾಗಿದೆ.
ಈಗಾಗಲೇ ಸರ್ಕಾರದಿಂದ ಮಾರ್ಗಸೂಚಿ ಕೂಡ ನೀಡಲಾಗಿದೆ. ಮಾಸ್ಕ್ ಕಡ್ಡಾಯವಾಗಿ ಬಳಸಿ, ಶುಚಿಯಾಗಿರುವುದು ನಮ್ಮ ಆರೋಗ್ಯಕ್ಕೇನೆ ಒಳ್ಳೆಯದು. ಆತಂಕ ಪಡುವಂತ ವಾತಾವರಣ ಇನ್ನು ಸೃಷ್ಟಿಯಾಗಿಲ್ಲ. ಮುಂಜಾಗ್ರತೆಯಿಂದ ಇರಿ ಎಂದು ಸರ್ಕಾರದಿಂದ ಸೂಚನೆಯನ್ನು ನೀಡಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್