Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿಯಲ್ಲಿ ಸೋಲಾರ್ ದೀಪ ಕದಿಯುತ್ತಿರುವ ಕಳ್ಳರು ಜಾನುವಾರುಗಳ ತಲೆ ಜೋಡಿಸುತ್ತಿದ್ದಾರೆ..!

Facebook
Twitter
Telegram
WhatsApp

ಬೆಳಗಾವಿ: ಕಳ್ಳರ ಗಿಮಿಕ್ ಒಂದೊಂದು ಸಲ ಒಂದೊಂದು ರೀತಿಯಾಗಿರುತ್ತೆ. ಆದ್ರೆ ಸೋಲಾರ್ ದೀಪ ಕಳುವಿಗಾಗಿ ಬೆಳಗಾವಿಯಲ್ಲಿ ಕಳ್ಳರು ಬೇರೆ ರೀತಿಯಲ್ಲಿಯೆರ ನಡೆದುಕೊಂಡಿದ್ದಾರೆ. ಜಾನುವಾರುಗಳ ತಲೆ ಉಪಯೋಗಿಸಿ, ಸೋಲಾರ್ ದೀಪಗಳನ್ನು ಕದ್ದಿದ್ದಾರೆ.

ಗೋಕಾಕ್ ನಗರದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಸೋಲಾರ್ ಲೈಟುಗಳ ಕಂಬಕ್ಕೆ ಜಾನುವಾರುಗಳ ಕೊಂಬು ಕಟ್ಟುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ವಿದ್ಯುತ್ ಕಂಬದಲ್ಲಿ ಜಾನುವಾರುಗಳ ಕೊಂಬು ಕಾಣಿಸುತ್ತಿದೆ. ಆದರೂ ಪೊಲೀಸರು ಮಾತ್ರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಾಲ್ಸ್ ಪ್ರಸಿದ್ಧ ತಾಣ, ಅಲ್ಲಿ ಪ್ರವಾಸಿಗರ ಸಂಚಾರಕ್ಕಾಗಿ ಇಡೀ ರಸ್ತೆಯುದ್ಧಕ್ಕೂ ಸೋಲಾರ್ ಲೈಟ್ ಅಳವಡಿಸಿದ್ದಾರೆ. ಆದರೆ ಕಳೆದ ಎರಡು ದಿನಗಳಿಂದ ಆ ಸೋಲಾರ್ ಲೈಟುಗಳನ್ನು ಕಳ್ಳತನ ಮಾಡುತ್ತಿದ್ದಾರೆ. ಈ ಘಟನೆ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿದೆ. ಕಳ್ಳತನ ಮಾಡಿದವರು, ಜಾನುವಾರುಗಳ ಬುರುಡೆಗಳನ್ನು ನೇತಾಕಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರಿಗೆ ಮಾಹಿತಿ ನೀಡಿದರು ಆ ಬುರುಡೆಗಳನ್ನು ತೆರವುಗೊಳಿಸಿಲ್ಲ ಎಂಬ ಬೇಸರ ಹೊರ ಹಾಕಿದ್ದಾರೆ.

ಆ ಸಾಲಿನಲ್ಲಿರುವ ಎರಡು ಮೂರು ಲೈಟ್ ಕಂಬದಲ್ಲಿ ಈ ರೀತಿ ಬುರುಡೆಗಳನ್ನು ನೇತಾಕಿ ಹೋಗಿದ್ದಾರೆ. ಇದು ಅಲ್ಲಿನ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ವಿದ್ಯುತ್ ದೀಪ ಕದ್ದಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲು ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜಿಲ್ಲೆಯಾದ್ಯಂತ 54 ವಿಶೇಷ ಮತಗಟ್ಟೆಗಳ ಸ್ಥಾಪನೆ, ಮತದಾರರ ಸ್ವಾಗತಕ್ಕೆ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು

ಚಿತ್ರದುರ್ಗ. ಏ.25: ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಏ.26ರಂದು ಶುಕ್ರವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 54 ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು,

ಚುನಾವಣೆ ಮಸ್ಟರಿಂಗ್ : ಮತದಾನ ಕಾರ್ಯಕ್ಕೆ ತೆರಳಿದ ಅಧಿಕಾರಿ ಹಾಗೂ ಸಿಬ್ಬಂದಿ

ಚಿತ್ರದುರ್ಗ .ಏ.25: ಲೋಕಸಭಾ ಸಾರ್ವತ್ರಿಕ ಚುನಾವಣೆಯ 2ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26 ತಾರೀಖು, ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

error: Content is protected !!