ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಸಿಪಿ ಯೋಗೀಶ್ವರ್ ನೋಡ ನೋಡುತ್ತಿದ್ದಂತೆ ಮೈತ್ರಿಗೆ ದೊಡ್ಡ ಆಘಾತವನ್ನೇ ನೀಡಿದ್ದಾರೆ. ನಿನ್ನೆ ಸಂಜೆವರೆಗೂ ಕಾದಿದ್ದ ಯೋಗೀಶ್ವರ್ ದಿಢೀರನೇ ಕಾಂಗ್ರೆಸ್ ಸೇರಿದ್ದಾರೆ. ಜೆಡಿಎಸ್ ಚಿಹ್ನೆ ನೀಡಿ ಸ್ಪರ್ಧಿಸಲಿ ಎಂದಿದ್ದ ಕುಮಾರಣ್ಣನಿಗೂ ಇದು ಶಾಕಿಂಗ್ ವಿಚಾರವೇ ಸರಿ. ಸಿಪಿ ಯೋಗೀಶ್ವರ್ ಕಾಂಗ್ರೆಸ್ ಸೇರಿದ ಮೇಲೆ ಮೈತ್ರಿ ಪಕ್ಷದಿಂದ ನಿಲ್ಲೋರು ಯಾರೂ ಎಂಬ ಪ್ರಶ್ನೆ ಎದುರಾಗಿದೆ.
ಸಪಿ ಯೋಗೀಶ್ವರ್ ಕಾಂಗ್ರೆಸ್ ಸೇರಿದ್ದರ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಯೋಗೀಶ್ವರ್ ಅವರು ರಾಜೀನಾಮೆ ಕೊಟ್ಟಿದ್ದರಲ್ಲಿ ಆಶ್ಚರ್ಯ ಪಡುವಂತದ್ದು ಏನು ಇಲ್ಲ. ಗಾಳಿಯಲ್ಲಿ ಗುಂಡು ಹೊಡೆಯುವಂತ ಆರೋಪವಲ್ಲ. ಯಾವಾಗ ತರಾತುರಿಯಲ್ಲಿ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದರೋ ಅವತ್ತೆ ಗೊತ್ತಿತ್ತು. ಇದರಲ್ಲಿ ಆಶ್ಚರ್ಯ ಏನು ಇಲ್ಲ. ಕಳೆದ ಎರಡು ತಿಂಗಳಿನಿಂದ ನನ್ನ ಹೆಸರು ಚಾಲ್ತಿಯಲ್ಲಿದೆ. ಜೆಡಿಎಸ್ ಕಾರ್ಯಕ್ರತ್ರು ಸಹ ನಿಖಿಲ್ ಗೆ ಟಿಕೆಟ್ ಕಿಟ್ಟರೆ ಕೆಲಸ ಮಾಡುತ್ತೇವೆ ಎಂದಿದ್ದರು. ಆದರೆ ಎಲ್ಲವೂ NDA ಕಡೆಯಿಂದ ಘೋಷಣೆಯಾಗಬೇಕು. ನಿನ್ನೆ ಕುಮಾರಣ್ಣ ಕೂಡ ಇದನ್ನೇ ಹೇಳಿದ್ದು, ತಾಳಿದವನು ಬಾಳಿಯಾನು ಅಂತ ಎಂದಿದ್ದಾರೆ.
ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್ ಅಶೋಕ್, ಕಾಂಗ್ರೆಸ್ ಗೆ ಈಗಾಗಲೇ ಹಲವು ನಾಯಕರು ಹೋಗಿ ಬಂದಿದ್ದಾರೆ. ಜಗದೀಶ್ ಶೆಟ್ಟರ್ ಕೂಡ ಕಾಂಗ್ರೆಸ್ ಸೇರಿಕೊಂಡರು. ಅಲ್ಲಿ ಅವರಿಗೆ ಯಾವುದೇ ಸ್ಥಾನ ಸಿಗಲಿಲ್ಲ. ವಾಪಸ್ ಬಂದರು. ಲಕ್ಷ್ಮಣ್ ಸವದಿ ಕೂಡ ಕಾಂಗ್ರೆಸ್ ಹೋಗಿದ್ದಾರೆ. ಅಲ್ಲಿ ಅವರಿಗೆ ಯಾವ ಸ್ಥಾನ ಸಿಕ್ಕಿದೆ. ಸಿಪಿ ಯೋಗೀಶ್ವರ್ ಕಥೆ ಕೂಡ ಹಾಗೆಯೇ ಆಗುತ್ತದೆ. ಅವರು ಕೂಡ ಕಾಂಗ್ರೆಸ್ ನಲ್ಲಿ ಲಾಸ್ಟ್ ಬೇಂಚ್ ನಲ್ಲೇ ಕೂರುತ್ತಾರೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್