Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚನ್ನಪಟ್ಟಣಕ್ಕೆ ಸಿಪಿ ಯೋಗೀಶ್ವರ್ ಸ್ಪರ್ಧೆ ಬಹುತೇಕ ಖಚಿತ : ಸಂಜೆ ಒಳಗೆ ಘೋಷಣೆ..!

---Advertisement---

ಬೆಂಗಳೂರು: ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಅಂದಿನಿಂದನೂ ಆ ಕ್ಷೇತ್ರದಿಂದ ತಾನೇ ಸ್ಪರ್ಧಿಸುವುದಾಗಿ ಸಿಪಿ ಯೋಗೀಶ್ವರ್ ಹೇಳುತ್ತಿದ್ದರು. ಉಪಚುನಾವಣೆಯ ದಿನಾಂಕ ಘೋಷಣೆಯಾದ ಮೇಲೂ ನಾನೇ ಅಭ್ಯರ್ಥಿ ಎನ್ನುತ್ತಿದ್ದರು. ಆದರೆ ಅಲ್ಲೊಂದು ಟ್ವಿಸ್ಟ್ ಕೂಡ ಶುರುವಾಗಿತ್ತು. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ಪರ್ಧಿಸುವಂತೆ ಮನವೊಲಿಸಲಾಗುತ್ತಿದೆ ಎನ್ನಲಾಗಿತ್ತು. ನಿಖಿಲ್ ಕುಮಾರಸ್ವಾಮಿ ನಿಲ್ಲದೆ ಹೋದರೆ ಅನಿತಾ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡುತ್ತಾರೆ ಎಂಬ ಮಾತಿತ್ತು. ಆದರೆ ಈಗ ಮೂಲಗಳ ಪ್ರಕಾರ ಸಿಪಿ ಯೋಗೀಶ್ವರ್ ಅವರಿಗೆ ಟಿಕೆಟ್ ನೀಎಲಾಗುತ್ತಿದೆ ಎನ್ನಲಾಗಿದೆ.

 

ಇಂದು ಸಂಜೆಯೊಳಗೆ ಚನ್ನಪಟ್ಟಣ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಈಗಾಗಲೇ ಶಿಗ್ಗಾವಿ ಮತ್ತು ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಘೋಷಣೆ ಮಾಡಲಾಗಿದೆ. ಈಗ ಚನ್ನಪಟ್ಟಣದಿಂದ ಸಿಪಿ ಯೋಗೀಶ್ವರ್ ಗೆ ಟಿಕೆಟ್ ನೀಡಿದರೆ ಮೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯೇ ಸ್ಪರ್ಧೆ ಮಾಡಿದಂತೆ ಆಗುತ್ತದೆ.

ಈ ಸಂಬಂಧ ನಿನ್ನೆ ರಾತ್ರಿಯೂ ಒಂದು ರೌಂಡ್ ಸಭೆಯಾಗಿದೆ. ಈ ಸಭೆಯಲ್ಲಿ ಬಿವೈ ವಿಜಯೇಂದ್ರ, ಆರ್. ಅಶೋಕ್ ಹಾಗೂ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಇದು ನಿಮ್ಮದೇ ಕ್ಷೇತ್ರ. ನಿಮಗೆ ಇಷ್ಟ ಬಂದವರನ್ನೇ ಘೋಷಣೆ ಮಾಡಿ ಎಂದು ಆರ್.ಅಶೋಕ್ ಮತ್ತು ವಿಜಯೇಂದ್ರ ಅವರು ಹೇಳಿದ್ದಾರಂತೆ. ಈ ಮೂಲಕ ಕುಮಾರಸ್ವಾಮಿ ಅವರು ಜೆಡಿಎಸ್ ನಿಂದಾನೇ ಸ್ಪರ್ಧಿಯನ್ನು ಇಳಿಸಲಿದ್ದು, ಸಿಪಿ ಯೋಗೀಶ್ವರ್ ಜೆಡಿಎಸ್ ನಿಂದಾನೇ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...