ಉತ್ತಾರಖಂಡ್ ನ ಜೋಶಿ ಮಠವನ್ನು ದೇವ ಭೂಮಿ ಎಂದೇ ಕರೆಯುತ್ತಾರೆ. ಆದ್ರೆ ಈ ದೇವಭೂಮಿಯಲ್ಲೀಗ ಜನ ಪ್ರಾಣಾಪಯದಲ್ಲಿದ್ದಾರೆ. ಯಾವಾಗ..? ಯಾರಿಗೆ..? ಏನಾಗುತ್ತೋ ಎಂಬ ಆತಂಕವಿದೆ. ಯಾಕಂದ್ರೆ ದಿನೇ ದಿನೇ ಮನೆಗಳು, ರಸ್ತೆಗಳು ಬಿರುಕು ಬಿಡುತ್ತಿವೆ. ಹೀಗಾಗಿ ಜನ ಆತಂಕದಲ್ಲಿದ್ದಾರೆ. ಜೋಶಿಮಠವನ್ನು ಅದಾಗಲೇ ಮುಲುಗುತ್ತಿರುವ ವಲಯ ಎಂದು ಘೋಷಣೆ ಮಾಡಲಾಗಿದೆ.
ಜೋಶಿಮಠದಲ್ಲಿ ಒಟ್ಟು 4,500 ಕಟ್ಟಡಗಳಿವೆ. ಅದರಲ್ಲಿ 610 ಕಟ್ಟಡಗಳು ದೊಡ್ಡ ಬಿರುಕು ಬಿಟ್ಟಿದೆ. ಈಗಾಗಲೇ ಬಿರುಕು ಬಿಟ್ಟ ಮನೆಗಳಿಗೆ ಹೋಗಿ ಆ ಮನೆಯವರನ್ನೆಲ್ಲ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಹೊಟೇಲ್, ಹೋಂ ಸ್ಟೇಗಳಿಗೆ ಸ್ಥಳಾಂತರಿಸಲಾಗಿದೆ. ಹಾನಿಯ ಪ್ರಮಾಣದ ಮಾಹಿತಿ ಪಡೆದು ಜನರನ್ನು ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ.
ಜೋಶಿಮಠದಲ್ಲಾದ ಘಟನೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಮನವಿ ಮಾಡಿದ್ದಾರೆ. ಇನ್ನು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಭೂಕುಸಿತದ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…