ಜೋಶಿ ಮಠದಲ್ಲಿ ಕಾಣಿಸುತ್ತಲೇ ಇದೆ ಬಿರುಕು : ಆತಂಕದಲ್ಲಿದ್ದಾರೆ ಜನ..!

ಉತ್ತಾರಖಂಡ್ ನ ಜೋಶಿ ಮಠವನ್ನು ದೇವ ಭೂಮಿ ಎಂದೇ ಕರೆಯುತ್ತಾರೆ. ಆದ್ರೆ ಈ ದೇವಭೂಮಿಯಲ್ಲೀಗ ಜನ ಪ್ರಾಣಾಪಯದಲ್ಲಿದ್ದಾರೆ. ಯಾವಾಗ..? ಯಾರಿಗೆ..? ಏನಾಗುತ್ತೋ ಎಂಬ ಆತಂಕವಿದೆ. ಯಾಕಂದ್ರೆ ದಿನೇ ದಿನೇ ಮನೆಗಳು, ರಸ್ತೆಗಳು ಬಿರುಕು ಬಿಡುತ್ತಿವೆ. ಹೀಗಾಗಿ ಜನ ಆತಂಕದಲ್ಲಿದ್ದಾರೆ. ಜೋಶಿಮಠವನ್ನು ಅದಾಗಲೇ ಮುಲುಗುತ್ತಿರುವ ವಲಯ ಎಂದು ಘೋಷಣೆ ಮಾಡಲಾಗಿದೆ.

ಜೋಶಿಮಠದಲ್ಲಿ ಒಟ್ಟು 4,500 ಕಟ್ಟಡಗಳಿವೆ. ಅದರಲ್ಲಿ 610 ಕಟ್ಟಡಗಳು ದೊಡ್ಡ ಬಿರುಕು ಬಿಟ್ಟಿದೆ. ಈಗಾಗಲೇ ಬಿರುಕು ಬಿಟ್ಟ ಮನೆಗಳಿಗೆ ಹೋಗಿ ಆ‌ ಮನೆಯವರನ್ನೆಲ್ಲ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಹೊಟೇಲ್, ಹೋಂ ಸ್ಟೇಗಳಿಗೆ ಸ್ಥಳಾಂತರಿಸಲಾಗಿದೆ. ಹಾನಿಯ ಪ್ರಮಾಣದ ಮಾಹಿತಿ ಪಡೆದು ಜನರನ್ನು ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ.

ಜೋಶಿಮಠದಲ್ಲಾದ ಘಟನೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಮನವಿ ಮಾಡಿದ್ದಾರೆ. ಇನ್ನು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಭೂಕುಸಿತದ ಬಗ್ಗೆ ಮಾಹಿತಿ ಪಡೆದಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago