Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ನಲ್ಲಿ ಮತ್ತೆ 3 ಡಿಸಿಎಂ ಹುದ್ದೆಗಳ ಸೃಷ್ಟಿ..!

---Advertisement---

 

ಬೆಂಗಳೂರು: ಒಂದು ಕಡೆ ಲೋಕಸಭಾ ಚುನಾವಣೆಗಳ ಭರ್ಜರಿ ತಯಾರಿಯ ಜೊತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಒಳಗೂ ಹೊಸ ಹೊಸ ವಿಚಾರಗಳು, ಸಂಗತಿಗಳು ನಡೆಯುತ್ತಿವೆ. ಅದುವೆ ಡಿಸಿಎಂ ವಿಚಾರಕ್ಕೆ. ಈಗಾಗಲೇ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಡಿಸಿಎಂ ಆಗಿದ್ದಾರೆ. ಇದೀಗ ಅವರ ಜೊತೆಗೆ ಇನ್ನು ಮೂವರು ಡಿಸಿಎಂಗಳಾಗಲಿದ್ದಾರೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ನಲ್ಲಿ ಈ ವಿಚಾರ ಬಾರಿ ಚರ್ಚೆಯಾಗುತ್ತಿದ್ದು, ಸಹಕಾರಿ ಸಚಿವ ಕೆ ಎನ್ ರಾಜಣ್ಣ ಈ ಸಂಬಂಧ ಹೈಕಮಾಂಡ್ ಬಳಿ ಡಿಮ್ಯಾಂಡ್ ಇಟ್ಟಿದ್ದಾರೆ ಎನ್ನಲಾಗಿದೆ. ಅದರ ಜೊತೆಗೆ ಪತ್ರ ಬರೆಯುವುದಕ್ಕೆ ಕೆ ಎನ್ ರಾಜಣ್ಣ ಮುಂದಾಗಿದ್ದಾರೆ ಎನ್ನಲಾಗಿದೆ. ವೀರಶೈವ, ಎಸ್‌ಸಿ/ಎಸ್ಟಿ, ಅಲ್ಪಸಂಖ್ಯಾತರಿಗೆ ಡಿಸಿಎಂ ಹುದ್ದೆ ಬೇಕು ಎಂದು ಡಿಮ್ಯಾಂಡ್ ಇಡಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಬೇರಿ ಬಾರಿಸಿದ್ದೇವೆ. ಈಗ ಲೋಕಸಭಾ ಚುನಾವಣೆ ಬರುತ್ತಿದೆ. ಈ ಚುನಾವಣೆಯಲ್ಲೂ ಜಯಬೇರಿ ಬಾರಿಸುವ ಅಗತ್ಯವಿದೆ. ಹೀಗಾಗಿ ಮೂರು ಡಿಸಿಎಂಗಳು ಬೇಕಾಗಿದ್ದಾರೆ ಎಂದು ಹೈಕಮಾಂಡ್ ಗೆ ಬರೆಯುವ ಪತ್ರದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಬಹುಮತಗಳೊಂದಿಗೆ ಜಯಗಳಿಸಿದ್ರು, ಸಿಎಂ ಹುದ್ದೆಗೆ ಸ್ಪರ್ಧೆ ಇತ್ತು. ಡಿಕೆ ಶಿವಕುಮಾರ್ ಅವರು ಸಿಎಂ ಹುದ್ದೆ ಬಿಟ್ಟುಕೊಡುವ ಮಾತೇ ಇರಲಿಲ್ಲ. ಆದರೂ ಹೈಕಮಾಂಡ್ ಮಾತಿಗೆ ಮಣಿದು, ಸದ್ಯ ಡಿಸಿಎಂ ಸ್ಥಾನ ಹಾಗೂ ಜಲಸಂಪನ್ಮೂಲ ಸಚಿವ ಸ್ಥಾನಕ್ಕೆ ಒಪ್ಪಿಗೆ ನೀಡಿದ್ದಾರೆ. ಅದು ಕೆಲವೊಂದು ಕಂಡೀಷನ್ ಮೇಲೆ. ಇದೀಗ ಮತ್ತೆ ಮೂರು ಡಿಸಿಎಂಗಳ ಸ್ಥಾನಗಳನ್ನು ನೀಡುವುದು ಅನುಮಾನವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...