Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಮಾಜವನ್ನು ಜಾಗೃತಿಗೊಳಿಸಲು ಸೃಜನಶೀಲ ಸಾಹಿತ್ಯ ರಚನೆ ಅಗತ್ಯ : ಬಿ.ಕೆ.ರಹಮತ್‍ವುಲ್ಲಾ

---Advertisement---

ಸುದ್ದಿಒನ್, ಚಿತ್ರದುರ್ಗ, (ಆ.06) : ಸಮಾಜವನ್ನು ಜಾಗೃತಿಗೊಳಿಸಲು ಸೃಜನಶೀಲ ಸಾಹಿತ್ಯ ರಚನೆ ಆಗಬೇಕು ಎಂದು ಖ್ಯಾತ ವಕೀಲ ಬಿ.ಕೆ.ರಹಮತ್‍ವುಲ್ಲಾ ಹೇಳಿದರು.

ನಗರದ ರೋಟರಿ ಬಾಲ ಭವನದಲ್ಲಿ ಭಾನುವಾರ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ, ರೋಟರಿ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಿಂಗಳ ವಿಶೇಷ ವ್ಯಕ್ತಿ ಪರಿಚಯ, ಕವಿಗೋಷ್ಟಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಬರಹಗಾರರಲ್ಲಿ ಯಾವುದೇ ಹಿಂಜರಿಕೆ ಇಲ್ಲದೆ ಸಾಹಿತ್ಯ ರಚನೆ ಮಾಡಬೇಕು. ಕ್ರಾಂತಿಕಾರಿಕ ಬರಹಗಳಿಂದ ದೇಶ ಸ್ವಾತಂತ್ರ್ಯ ಗಳಿಸಲು ಸಹಕಾರಿಯಾಗಿದೆ. ಸಮಾಜದ ಪ್ರತಿ ಕ್ಷೇತ್ರವೂ ಪ್ರಗತಿಪರವಾಗಿ ಅಭಿವೃದ್ದಿ ಕಾಣಲು ವಿಮರ್ಶಾತ್ಮಕ ಸಾಹಿತ್ಯ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕಿದೆ. ಸಾಹಿತ್ಯ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಮೂಲ ಪ್ರತಿಭಾವಂತ ಬರಹಗಾರರನ್ನು ಸಮಾಜಕ್ಕೆ ಪರಿಚಯಿಸುವ ಅಗತ್ಯ ಇದೆ ಎಂದು ಹೇಳಿದರು.

ತಿಂಗಳ ವಿಶೇಷ ಅತಿಥಿ, ಉಪನ್ಯಾಸಕಿ ರೇಣುಕಾಪ್ರಕಾಶ್ ಮಾತನಾಡಿ, ಆಂತರಿಕ ದೃಷ್ಟಿಕೋನದಲ್ಲಿ ಸಮಾಜದ ಸೌಂದರ್ಯ ಕಾಣಬೇಕಿದೆ. ಲೋಕಾನುಭವ ಅರ್ಥೈಸಿಕೊಳ್ಳಲು ಹಿರಿಯರ ಸಾಹಿತ್ಯ ಮತ್ತು ಬದುಕಿನ ಆದರ್ಶವನ್ನು ಅನುಸರಣೆ ಮಾಡಬೇಕು. ಪ್ರತಿಯೊಬ್ಬರಿಗೂ ನೈತಿಕ ಜವಾಬ್ದಾರಿ ಇದೆ ಎನ್ನುವ ಭಾವನೆಯಲ್ಲಿ ಸಮಾಜದ ವಿವಿಧ ವರ್ಗಗಳ ಸಂಬಂಧ ಕಾಣಬೇಕಿದೆ. ಸಾಹಿತ್ಯ ಸಂಘಟನೆಗಳ ಸಂಬಂಧದಿಂದ ಸತ್ವಯುತ ಬರಹದ ಸ್ಥೈರ್ಯ ಕಂಡುಕೊಳ್ಳಲು ಕಾರಣವಾಗುತ್ತದೆ ಎಂದು ಹೇಳಿದರು.

ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಮಾತನಾಡಿ, ಸಮಾಜದಲ್ಲಿ ಗತಿಸುವ ಘಟನೆಗಳಿಗೆ ಕವಿ ಮನಸ್ಸು ದ್ವನಿಯಾಗಬೇಕು. ಪ್ರಾಕೃತಿಕ ಸೌಲಭ್ಯದಲ್ಲೂ ಸಮಾನತೆ ಇಲ್ಲದೆ ಜೀವ ಕಳೆದುಕೊಳ್ಳುವ ಕವಾಡಿಗರಹಟ್ಟಿಯಂತಹ ದುರಂತಕ್ಕೆ ಮನ ಮಿಡಿಯಬೇಕು. ಸ್ವಾತಂತ್ರ್ಯ ಭಾರತದಲ್ಲಿ ಇಂದಿಗೂ ಪುರುಷ ಪ್ರಧಾನ ದಬ್ಬಾಳಿಕೆಯಲ್ಲಿ ಮಹಿಳೆಯರನ್ನು ಹಿಂಸಿಸುತ್ತಿರುವ ತಲ್ಲಣಗಳ ಬಗ್ಗೆ ದನಿ ಎತ್ತಬೇಕಿದೆ ಎಂದರು.

ಚಿನ್ಮೂಲಾದ್ರಿ ಸಂಸ್ಥಾಪಕಿ ಆರ್. ದಯಾಪುತ್ತೂರ್ಕರ್, ಕವಿ ಎಂ. ಜಬೀವುಲ್ಲಾ ಅಸದ್, ಡಾ. ಚಾಂದನಿ ಖಲೀದ್, ಶಿಕ್ಷಕಿ ಪುಷ್ಪವಲ್ಲಿ, ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಸ್. ಕಾಂತರಾಜ್ ಮಾತನಾಡಿದರು.

ಬಳಿಕ ನಡೆದ ಕವಿಗೋಷ್ಟಿಯಲ್ಲಿ ಸತ್ಯಪ್ರಭವಸಂತಕುಮಾರ್, ಶೋಭಾ ಮಲ್ಲಿಕಾರ್ಜುನ, ಜಯದೇವಮೂರ್ತಿ, ಶಿವರುದ್ರಪ್ಪ ಪಂಡರಹಳ್ಳಿ, ಕೆ.ಎಸ್. ತಿಪ್ಪಮ್ಮ, ಮಹಮ್ಮದ್ ಸಾದತ್, ತಿಪ್ಪೀರಮ್ಮ, ಮೆಹಬೂಬಿ, ಕೆ.ಎಚ್. ಜಯಪ್ರಕಾಶ್, ಸುಜಾತ ಪ್ರಾಣೇಶ್, ಬಬ್ಬೂರು ತಿಪ್ಪೀರನಾಯಕ, ದೀಪಿಕಾ ಬಾಬು, ನಿರ್ಮಲ ಮಂಜುನಾಥ್, ಮಂಜಮ್ಮ ತಿಮ್ಮಶೆಟ್ರು, ಪ್ರಹ್ಲಾದ್, ಲೋಕೇಶ್, ಕೆ.ಬಿ. ಮಹೇಶ್, ಇಂಗಳದಾಳು ತಿಮ್ಮಯ್ಯ ಸೇರಿ 20ಕ್ಕೂ ಹೆಚ್ಚು ಕವಿಗಳು ಕವಿತೆ ವಾಚನ ಮಾಡಿದರು.

ಡಾ. ಎಸ್.ಎಸ್. ಶಫೀವುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಶೋಭಾ ಮಲ್ಲಿಕಾರ್ಜುನ ಪ್ರಾರ್ಥನೆ ಮಾಡಿದರು. ಮೀರಾನಾಡಿಗ್ ಸ್ವಾಗತ ಕೋರಿ, ಪ್ರವೀಣ್ ಬೆಳಗೆರೆ ಕಾರ್ಯಕ್ರಮ ನಿರೂಪಣೆ ಮಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment