Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಕಾರು.. ಸರ್ಕಾರಿ ವಿಮಾನ ಬಳಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡ್ತಾರೆ : ಮೋದಿ ವಿರುದ್ಧ ಖರ್ಗೆ ವಾಗ್ದಾಳಿ..!

---Advertisement---

ತುಮಕೂರು: ಇಂದು ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಶಕ್ತಿ ಪ್ರದರ್ಶನ ತೋರಿದೆ. ಕಾಂಗ್ರೆಸ್ ಭದ್ರಕೋಟೆಯಾಗಿರುವ ಕೊರಟಗೆರೆಯಲ್ಲಿ ಈ ಬಾರಿಯೂ ಪರಮೇಶ್ವರ್ ಗೆದ್ದು, ಮುಖ್ಯಮಂತ್ರಿ ಪಟ್ಟಕ್ಕೇರುವ ನಿರೀಕ್ಷೆ ಹೊಂದಿದ್ದಾರೆ. ಕಳೆದ ಬಾರಿಯ ಸೋಲಿಗೆ ಪರಮೇಶ್ವರ್, ಮತ್ತೆ ಜನರ ಆಶೀರ್ವಾದ ಕೇಳಿದ್ದಾರೆ. ಚುನಾವಣಾ ಹಿನ್ನೆಲೆ ಇಂದು ಕಾಂಗ್ರೆಸ್ ನಾಯಕರು ಬೃಹತ್ ಸಮಾವೇಶ ನಡೆಸಿದ್ದಾರೆ.

ಕೊರಟಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಖರ್ಗೆ, ಸರ್ಕಾರಿ ಕಾರು, ಸರ್ಕಾರಿ ವಿಮಾನ ಬಳಕರ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಟೀಕಿಸುವುದು ಎಷ್ಟು ಸರಿ ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಪ್ರಧಾನಿ ಮೋದಿ ಎರಡು ಕಲಬುರಗಿಗೆ ಬಂದು ಹೋಗಿದ್ದಾರೆ. ಎರಡು ಕಡೆಯಲ್ಲಿ ಭಾಷಣ ಮಾಡಿದ್ದಾರೆ. ಅವರಲ್ಲಿ ಅಧಿಕಾರವಿದೆ. ಪಾಪ ಭಾಷ ಮಾಡಲಿ. ಅಧಿಕಾರ ಕೊಟ್ಟಾಗ ಅಭಿವೃದ್ಧಿ ಮಾಡುವ ಬದಲಾಗಿ ಟೀಕೆ ಟಿಪ್ಪಣಿಗೆ ಬಿಜೆಪಿ ಸೀಮಿತವಾಗಿದೆ. ಮೋದಿ ಅಧಿಕಾರದ ಕೈಕೆಳಗೇನೆ ಭ್ರಷ್ಟಾಚಾರ ನಡೆಯುತ್ತಿದೆ. ಕೆಂದ್ರ ಮತ್ತು ರಾಜ್ಯ ಸೇರಿದ್ರೆ 100% ಭ್ರಷ್ಟಾಚಾರ ನಡೆಯುತ್ತದೆ.

ನಾನು ಹನ್ನೊಂದು ಬಾರು ಚುನಾವಣೆಗೆ ನಿಂತಿದ್ದೇನ. ಆದರೆ ಇಂತಹ ಭ್ರಷ್ಟಾಚಾರ ಎಂದು ನೋಡಿಲ್ಲ ಎಂದು ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸದ್ಯ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ಕಾಂಗ್ರೆಸ್ ನಾಯಕರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...