Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕಳಪೆ ತೊಗರಿ ಬೀಜ ವಿತರಣೆಯಿಂದ ಬೆಳೆ ಹಾಳು : ಪರಿಹಾರಕ್ಕಾಗಿ ರಾಜ್ಯ ರೈತ ಸಂಘ ಆಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,ಡಿ.26: ಮುಂಗಾರು ಮಳೆ ಹೆಚ್ಚಾಗಿ ಹಾಳಾಗಿರುವ ಈರುಳ್ಳಿ ಬೆಳೆ ಹಾಗೂ ಇಲಾಖೆ ವತಿಯಿಂದ ವಿತರಣೆ ಮಾಡಿರುವ ಕಳಪೆ ತೊಗರಿ ಬೀಜ ವಿತರಣೆಯಿಂದಾಗಿ ಹಾಳಾಗಿದ್ದು ಬೆಳೆಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದವರು ಆಗ್ರಹಿಸಿದರು.

ಚಿತ್ರದುರ್ಗ ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಸಂಘದ ಪದಾಧಿಕಾರಿಗಳು ಮುಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರು ಉತ್ತಮ ಹಾಗೂ ಗುಣಮಟ್ಟದ ಬೀಜಗಳು ದೊರೆಯುತ್ತವೆ ಎಂದು ರೈತ ಸಂಪರ್ಕ ಕೇಂದ್ರಗಳಿಗೆ ಹೋಗಿ ಎಲ್ಲಾ ತರಹದ ಬೀಜಗಳನ್ನು ಖರೀದಿ ಮಾಡಿದ್ದಾರೆ. ಆದರೆ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೀಜವು ಸುಮಾರು 6-7 ತಿಂಗಳಾದರು ಹೂವು ಕಾಯಿ ಕಟ್ಟಿರುವುದಿಲ್ಲ, ರೈತರು 1 ಎಕರೆಗೆ ಸುಮಾರು 35-40 ಸಾವಿರ ಹಣ ಖರ್ಚು ಮಾಡಿ, ಹಣ ಕಳೆದ ಕೊಂಡಿರುತ್ತಾರೆ ಆದ್ದರಿಂದ ಸಂಬಂಧಪಟ್ಟ ಕೃಷಿ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಈರುಳ್ಳಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಸುಮಾರು 4 ವರ್ಷದಿಂದಲೂ ಈರುಳ್ಳಿ ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. 2024ರ ಮುಂಗಾರು ಮಳೆಯು ಹೆಚ್ಚು ಬಂದಿದ್ದು, ಈರುಳ್ಳಿ ಬೆಳೆಯು ಜಮೀನಿನಲ್ಲಿ ಕೊಳೆತು ಹೋಗಿದೆ. ಜಿಲ್ಲಾ ಪಂಚಾಯತ್ ಸಿಇಓ ರೈತರ ಜಮೀನಿಗೆ ಭೇಟಿ ಮಾಡಿ ಈರುಳ್ಳಿ ನಷ್ಟವಾಗಿರುವುದನ್ನು ವೀಕ್ಷಿಸಿದರು. ಇದುವರೆಗೂ ರೈತರಿಗೆ ಕೆಲವೊಂದು ಪಂಚಾಯಿತಿಗೆ ಮಾತ್ರ ಪರಿಹಾರ ಹಣವನ್ನು ಹಾಕಿದ್ದು, ಅತಿ ಹೆಚ್ಚು ಈರುಳ್ಳಿ ಬೆಳೆಯುವಂತಹ ಪಂಚಾಯಿತಿಗಳಿಗೆ ಪರಿಹಾರವನ್ನು ಹಾಕದೆ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಕೂಡಲೇ ಎಲ್ಲಾ ರೈತರಿಗೂ ಪರಿಹಾರ ಹಣವನ್ನು ನೀಡಬೇಕು ಎಂದು ಆಗ್ರಹಿಸಿದರು.

 

ವಿದ್ಯುತ್ ಅಕ್ರಮ ಸಕ್ರಮವನ್ನು ಸರ್ಕಾರ 2023ರಲ್ಲಿ ರದ್ದು ಮಾಡಿದೆ ಇದರಿಂದ ರೈತರಿಗೆ ತುಂಬಾ ಅನಾನುಕೂಲವಾಗುತ್ತಿದೆ, ರೈತರು ವಿದ್ಯುತ್ ಸಂಪರ್ಕ ಪಡಯಬೇಕಾದರೆ 3-4 ಲಕ್ಷ ರೂಗಳನ್ನು ರೈತ ಖರ್ಚು ಮಾಡಬೇಕಿದೆ ಈ ಹಿನ್ನಲೆಯಲ್ಲಿ ಸರ್ಕಾರ ಈ ಕೂಡಲೇ ಅಕ್ರಮ-ಸಕ್ರಮವನ್ನು ಮರು ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಲಾಯಿತು.

 

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಧನಂಜಯ, ಬಸ್ತಿಹಳ್ಳಿ ಸುರೇಶ್ ಬಾಬು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಭೂತಯ್ಯ, ಇಸ್ಸಮುದ್ರ ಪ್ರಭು ಮಲ್ಲಾಪುರ ತಿಪ್ಪೇಸ್ವಾಮಿ, ಹಿರಿಯೂರು ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಯುವ ಅಧ್ಯಕ್ಷ ಚೇತನ ಯಳನಾಡು, ತಿಪ್ಪೇಸ್ವಾಮಿ ಕೆರೆನಹಳ್ಳಿ, ಗೌಸ್ ಪೀರ್, ಸುರೇಶ್, ಶಿವರಾಜು, ಅಪ್ಪು, ಅಮರೇಶ್, ಅಜ್ಜಣ್ಣ, ಲಕ್ಷ್ಮೀಕಾಂತ್, ರೇವಣ್ಣ, ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...