Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಳೆ ನಷ್ಟ : ರೈತರು ಆತ್ಮಹತ್ಯೆ ಮಾಡಿಕೊಂಡಾಗ ಕೊಡುವ ಪರಿಹಾರ ಬದುಕಿದ್ದಾಗಲೆ ಕೊಡಿ : ರೈತರ ಅಳಲು

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ,
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 24 : ತಾಲೂಕಿನಲ್ಲಿ ಸುಮಾರು 2200 ಹೆಕ್ಟರ್ ಭೂಮಿಯಲ್ಲಿ ನಾಟಿ ಮಾಡಲಾಗಿದ್ದ ಈರುಳ್ಳಿ ಬೆಳೆಗಾರರಿಗೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಕೈಗೆ ಬಂದ ಬೆಳೆ ಬಾಯಿಗೆ ಸಿಗದಂತಾಗಿದೆ. ಮಾರುಕಟ್ಟೆಯಲ್ಲಿ ಒಂದು ಪಾಕೆಟ್‌ಗೆ 2 ಸಾವಿರ ತನಕ ಒಳ್ಳೆಯ ರೇಟಿದೆ. ಆದರೆ, ಜಮೀನಿನಲ್ಲಿ ಕಟಾವು ಮಾಡಿಕೊಂಡ ಈರುಳ್ಳಿಯನ್ನು ಮಳೆಯಿಂದ ರಕ್ಷಣೆ ಮಾಡಿಕೊಳ್ಳುವುದು ರೈತರಿಗೆ ಒಂದು ಸವಾಲಾಗಿ ಪರಿಣಮಿಸಿದೆ.

ತಾಲೂಕಿನ ವಿಡುಪನಕುಂಟೆ ಗ್ರಾಮದ ರೈತ ಇ. ರಾಜಣ್ಣ ಜೂನ್ ತಿಂಗಳಲ್ಲಿ ಮೂರು ಎಕರೆ ಜಮೀನಿನಲ್ಲಿ 6 ಕೆಜಿ ಈರುಳ್ಳಿ ನಾಟಿ ಮಾಡಲಾಗಿತ್ತು. ಕಟಾವು ಮಾಡಿರುವ ಪರಿಸ್ಥಿತಿಯಲ್ಲಿ ಅತಿಯಾದ ಮಳೆಯಿಂದ ಶೇ.60 ರಷ್ಟು ಈರುಳ್ಳಿ ಮಳೆನೀರು ಪಾಲಾಗಿದೆ. 2 ರಿಂದ 3 ಲಕ್ಷ ಖರ್ಚು ಮಾಡಿಕೊಂಡು ಬೆಳೆ ಪೋಷಣೆ ಮಾಡಿಕೊಳ್ಳಲಾಗಿತ್ತು. ಮಾರುಕಟ್ಟೆಯಲ್ಲಿ ಒಳ್ಳೆ ಬೆಲೆ ಇದೆ ಈ ಸಮಯದಲ್ಲೂ ರೈತರಿಗೆ ಈರುಳ್ಳಿ ಬೆಳೆ ನಷ್ಟವಾಗಿದೆ. ಸಾಲಕ್ಕೆ ಸಿಲುಕಿ ರೈತರು ಆತ್ಮಹತ್ಯೆ ಮಾಡಿಕೊಂಡಾಗ ಪರಿಹಾರ ನೀಡುವುದು ಮುಖ್ಯವಲ್ಲ. ಸಾಲಗಾರರಾದ ರೈತರಲ್ಲಿ ಕೃಷಿ ಚಟುವಟಿಕೆ ಉತ್ಸಾಹ ತುಂಬಲು ಮತ್ತು ಕುಟುಂಬ ರಕ್ಷಣೆ ಮಾಡಲು ಬೆಳೆ ನಷ್ಟಕ್ಕೆ ತಕ್ಷಣ ಪರಿಹಾರ ವಿತರಣೆ ಮಾಡಬೇಕು ಎಂದು ಇ.ರಾಜಣ್ಣ ಮನವಿ ಮಾಡಿಕೊಂಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment