Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಓಡು ಓಡು ಓಡು ಓಡಲೇ.. ಪಿಎಸ್ಐ ಮುಂದೆ, ಅಧಿಕಾರಿಗಳು ಹಿಂದೆ ಓಡಿದ್ದು ಯಾಕೆ ಗೊತ್ತಾ..?

Facebook
Twitter
Telegram
WhatsApp

ತುಮಕೂರು: ಲಂಚ ಸ್ವೀಕರಿಸುವುದು ಮಹಾಪರಾಧ ಅನ್ನೋದು ಎಲ್ಲಾ ಅಧಿಕಾರಿಗಳಿಗೂ ಗೊತ್ತು. ಆದ್ರೆ ಕೆಲವೊಂದಿಷ್ಟು ಅಧಿಕಾರಿಗಳ ಲಂಚದ ದಾಹ ಕಡಿಮೆಯಾಗುವ ಹಾಗೇ ಕಾಣೋಲ್ಲ. ಆದ್ರೆ ಜಿಲ್ಲೆಯಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಲಂಚ ತೆಗೆದುಕೊಳ್ಳುವಾಗಲೇ ಸಿಕ್ಕಿಬಿದ್ದ ಪಿಎಸ್ಐ ಅಧಿಕಾರಿಗಳಿಂದ ಕಣ್ತಪ್ಪಿಸಿಕೊಂಡು ಓಡಿದ್ದಾನೆ.

ಸಿ ಎಸ್ ಪುರ ಠಾಣೆಯಲ್ಲಿ ಚಂದ್ರಪ್ಪ ಎಂಬುವವರ ವಿರುದ್ಧ ಕೌಟುಂಬಿಕ ಕಲಹದ ಕೇಸ್ ದಾಖಲಾಗಿತ್ತು. ಈ ವೇಳೆ ಚಂದ್ರಪ್ಪ ಅವರ ಕಾರನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಜಾಮೀನು ಪಡೆದ ಚಂದ್ರಪ್ಪ ಕಾರನ್ನ ಬಿಡಿಸಿಕೊಳ್ಳಲು ಸ್ಟೇಷನ್ ಗೆ ಹೋಗಿದ್ದರು. ಆದ್ರೆ ಅಲ್ಲಿ ಪೇದೆ ಮೂಲಕ 28 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ.

ಆ ಬಳಿಕ ಪಿಎಸ್ಐ ಸೋಮಶೇಖರ್ ಗೆ ಮೊದಲ ಕಂತಾಗಿ 12 ಸಾವಿರ ಹಣ ನೀಡಿದ್ದರಂತೆ ಚಂದ್ರಪ್ಪ. ಇವತ್ತು ಇನ್ನುಳಿದ 16 ಸಾವಿರ ಹಣ ನೀಡುವಾಗ ರೆಡ್ ಹ್ಯಾಂಡಾಗಿ ಎಸಿಬಿ ಅಧಿಕಾರಿಗಳ ಬಲೆಗೆ ಸೋಮಶೇಖರ್ ಬಿದ್ದಿದ್ದಾರೆ.‌ ಚಂದ್ರಪ್ಪ ಲಂಚದ ಬಗ್ಗೆ ಎಸಿಬಿ ಅಧಿಕಾರಿಗಳಿಗೆ ಈ ಮೊದಲೇ ದೂರು ನೀಡಿದ್ದರು ಎನ್ನಲಾಗಿದೆ.

ದಾಳಿ ನಡೆಸಿದ ಬಳಿಕ ಪಿಎಸ್ ಹಾಗೂ ಕಾನ್ಸ್ಟೇಬಲ್ ನಯಾಜ್ ನನ್ನು ವಿಚಾರಣೆ ಮಾಡಿದ್ದಾರೆ. ಊಟದ ಸಮಯವಾದ್ದರಿಂದ ಅಧಿಕಾರಿಗಳು ಊಟ ಮಾಡಲು ತೆರಳಿದ ಸಮಯವನ್ನೇ ಕಾದು ಪಿಎಸ್ಐ ಸೋಮಶೇಖರ್ ತಮ್ಮ ಫೋನ್ ಎತ್ತುಕೊಂಡು ಪರಾರಿಯಾಗಿದ್ದಾನೆ. ಅಧಿಕಾರಿಗಳು ಕೂಡ ಪಿಎಸ್ಐ ಹಿಂದೆಯೇ ಓಡಿದ್ದಾರೆ ಆದರೇ ಯಾವುದೇ ಪ್ರಯೋಜನವಾಗಿಲ್ಲ. ಪಿಎಸ್ಐ ತಪ್ಪಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!