Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CSK ನಾಯಕನ ಸ್ಥಾನ ಬದಲಾವಣೆ : ಧೋನಿ ಸ್ಥಾನಕ್ಕೆ ಬಂದ್ರು ಋತುರಾಜ್ ಗಾಯಕ್ವಾಡ್

Facebook
Twitter
Telegram
WhatsApp

ಚೆನ್ನೈ: ಐಪಿಎಲ್ ಆಟಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವಾಗಲೇ CSK ಫ್ಯಾನ್ಸ್ ಗೆ ಆಘಾತವಾದ ಸುದ್ದಿಯೊಂದು ಹೊರಬಿದ್ದಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವ ಬದಲಾವಣೆಯಾಗಿದ್ದು, ಆ ಜಾಗಕ್ಕೆ ಋತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ. ಧೋನಿ ನಾಯಕತ್ವದಿಂದ ಇಳಿದ ಮಾಹಿತಿಯನ್ನು ಐಪಿಎಲ್ ಮೂಲಗಳು ಖಚಿತಪಡಿಸಿವೆ.

ಐಪಿಎಲ್ ನ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಯಾಗಿದ್ದರು. ಐದು ಬಾರಿ ಚಾಂಪಿಯನ್ ಆಗಿದ್ದರು. ಇದೀಗ ದಿಢೀರನೇ ನಾಯಕತ್ವ ಬದಲಾವಣೆಯಾಗಿದೆ. 2019ರಿಂದ ಐಪಿಎಲ್ ನಲ್ಲಿ ಆಡುತ್ತಿರುವ ಋತುರಾಜ್, ಐಪಿಎಲ್ 2021ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಒಂದು ಋತುವಿನಲ್ಲಿ 635 ರನ್ ಗಳನ್ನು ಗಳಿಸಿದ್ದಾರೆ‌. ಏಷ್ಯನ್ ಗೇಮ್ ನಲ್ಲಿ ಗಾಯಕ್ವಾಡ್ ಮೂರು ಟಿ 20 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನೆಡೆಸಿದ್ದಾರೆ. ಅಲ್ಲಿ ಭಾರತ ಟ್ರೋಫಿ ಗೆದ್ದಿದೆ.

ಐಪಿಎಲ್ 2024 ಪ್ರಾರಂಭವಾಗುವ ಮುನ್ನವೇ ಎಂ ಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಋತುರಾಜ್ ಗಾಯಕ್ವಾಡ್ ಗೆ ಹಸ್ತಾಂತರಿಸಿದ್ದಾರೆ. ಋತುರಾಜ್ 2019 ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಎಂ ಎಸ್ ಧೋನಿ 2022ರಲ್ಲಿ ರವೀಂದ್ರ ಜಡೇಜಾಗೆ ನಾಯಕತ್ವವನ್ನು ಹಸ್ತಾಂತರ ಮಾಡಿದ್ದರು. ಆ ವೇಳೆಯಿಂದಾನೇ ಸಿ ಎಸ್ ಕೆ ಧೋನಿಯ ಉತ್ತರಾಧಿಕಾರಿಯ ಹುಡುಕಾಟ ಶುರು ಮಾಡಿತ್ತು. ಆದರೆ ಅದರಲ್ಲಿ ಸಿ ಎಸ್ ಕೆ ವಿಫಲಗೊಂಡಿತ್ತು. ಅಪೇಕ್ಷಣೀಯ ಫಲಿತಾಂಶಗಳನ್ನು ಪಡೆಯುವಲ್ಲಿ ವಿಫಲವಾದಾಗ ಹಡೇಜಾ ಅವರಿಂದ ಧೋನಿ ಮತ್ತೆ ಅಧಿಕಾರ ಪಡೆದುಕೊಂಡಿದ್ದರು. ಕಳೆದ ವರ್ಷದ ಐಪಿಎಲ್ ನಲ್ಲಿ ಧೋನಿ ತಮ್ಮ ಸಿ ಎಸ್ ಕೆ ತಂಡವನ್ನು ಐದನೇ ಬಾರಿಗೆ ಪ್ರಶ್ತಿ ಗೆಲ್ಲುವ ಮೂಲಕ ಮುನ್ನೆಡೆಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!