Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ : ಸಿಎಂ ಸಿದ್ದರಾಮಯ್ಯ

---Advertisement---

ಕಲಬುರಗಿ, ಡಿ. 22: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು‌.

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.

ತೊಗರಿ ಪ್ಯಾಕೇಜ್ : ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಿ ಎನ್ನುವ ಬೇಡಿಕೆ ರೈತರಿಂದ ಇದೆ. ತೊಗರಿ ಬೆಳೆ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ. ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಜಯದೇವ ಮಹತ್ವದ ಹೆಜ್ಜೆ :

ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371J ಜಾರಿಯಾಗಿದೆ. ಇಲ್ಲಿ 371 ಬೆಡ್ ಗಳ ಆಸ್ಪತ್ರೆಯನ್ನು ಇಂದು ಉದ್ಘಾಟಿಸುತ್ತಿದ್ದೇವೆ ಎಂದರು.

ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ :

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...