Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ : ಸಿಎಂ ಸಿದ್ದರಾಮಯ್ಯ

---Advertisement---

ಕಲಬುರಗಿ, ಡಿ. 22: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು‌.

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.

ತೊಗರಿ ಪ್ಯಾಕೇಜ್ : ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಿ ಎನ್ನುವ ಬೇಡಿಕೆ ರೈತರಿಂದ ಇದೆ. ತೊಗರಿ ಬೆಳೆ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ. ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಜಯದೇವ ಮಹತ್ವದ ಹೆಜ್ಜೆ :

ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371J ಜಾರಿಯಾಗಿದೆ. ಇಲ್ಲಿ 371 ಬೆಡ್ ಗಳ ಆಸ್ಪತ್ರೆಯನ್ನು ಇಂದು ಉದ್ಘಾಟಿಸುತ್ತಿದ್ದೇವೆ ಎಂದರು.

ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ :

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment