Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಸ್ಕಾರಯುತ ವಿದ್ಯಾವಂತರು ಸಮಾಜಕ್ಕೆ ದೊಡ್ಡ ಸಂಪತ್ತು : ಚಂದ್ರಶೇಖರ ಸ್ವಾಮೀಜಿ

---Advertisement---

ಸುದ್ದಿಒನ್, ಗುಬ್ಬಿ, ಜುಲೈ.28 : ಶಿಕ್ಷಣಕ್ಕೆ ಆದ್ಯತೆ ಕೊಟ್ಟ ನಾಡು ಸೌಖ್ಯವಾಗಿರುತ್ತದೆ. ಯಾರಲ್ಲಿ ಹಣ ಅಧಿಕಾರ ಇರುತ್ತದೆಯೋ ಅವರು ತ್ಯಾಗಿಗಳಾಗಿರಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಪ್ರೀತಿಸುವ ಗುಣವಂತರಾಗಬೇಕು ಸಂಸ್ಕಾರಯುತ ವಿದ್ಯಾವಂತರು ಸಮಾಜಕ್ಕೆ ದೊಡ್ಡ ಆಸ್ತಿ ಎಂದು ಗವಿಮಠ ಬೆಟ್ಟದಹಳ್ಳಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಹೊರವಲಯ ಹೇರೂರು ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆದ ತಾಲೂಕು ವೀರಶೈವ ಲಿಂಗಾಯಿತ ನೌಕರರ ಸಮಾವೇಶ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಅವರು ಸಂಸ್ಕಾರ ಎಂದರೆ ಅರಿವು ಆಚಾರ ತಿಳುವಳಿಕೆ ಹೊರೆತು ದ್ಯಾನ ಪೂಜೆ ತಪಸ್ಸು ಮಾಡುವುದಲ್ಲ ಎಲ್ಲರನ್ನೂ ಅಪ್ಪಿಕೊಂಡು ಎಲ್ಲರಲ್ಲೂ ದೇವರನ್ನು ಕಾಣುವ ಅನ್ನ ಆಹಾರ ವಿದ್ಯೆ ನೀಡುವ ಧರ್ಮ ವೀರಶೈವ ಧರ್ಮ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಮಾತನಾಡಿ ಮಕ್ಕಳು ತಂದೆ ತಾಯಿಗಳನ್ನು ಗೌರವಿಸಬೇಕು. ಪೂರ್ವಿಕರ ಆಚಾರ ವಿಚಾರ ನಡೆ-ನುಡಿ ಮೈಗೂಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಸಂಬಂಧಗಳು ಮರೆಯಾಗುತ್ತಿವೆ. ಸಮಾಜದಲ್ಲಿ ಉನ್ನತ ಸ್ಥಾನ ಹೊಂದಿದಾಗ ನಾವು ನಡೆದು ಬಂದ ದಾರಿ ಮರೆಯಬಾರದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಕೆ ಎಂ ರವೀಶ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ ಎಸ್ ಸಿದ್ದಲಿಂಗಪ್ಪ, ಪ್ರಾಂಶುಪಾಲ ಡಾ. ಪ್ರಸನ್ನ ಭಾ.ಜ.ಪ. ತಾಲೂಕ ಅಧ್ಯಕ್ಷ ಬಿಎಸ್ ಪಂಚಾಕ್ಷರಿ, ಕ, ಸಾ, ಪ, ತಾಲೂಕ್ ಅಧ್ಯಕ್ಷ ಎಚ್ ಸಿ ಯತೀಶ್, ಶಿವ ಬಸವ ನೌಕರರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಎಸ್ ಯೋಗಾನಂದ ಮುಖಂಡರಾದ ಚಂದ್ರಶೇಖರ ಬಾಬು, ಪ್ರಭಣ್ಣ,ಹೇರೂರು ರಮೇಶ್, ಸೋಮಶೇಖರ್, ದಿವ್ಯ ಪ್ರಕಾಶ್, ಮನುಕೊಪ್ಪ, ಶಶಿಕಲಾ ಯೋಗೇಶ್, ಶಿಕ್ಷಕರಾದ ದಯಾನಂದ್, ಉಮೇಶ್, ನಂದೀಶ್, ಇತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...