ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಉಚಿತವಾಗಿ ಪಡಿತರ ಧಾನ್ಯಗಳನ್ನು ವಿತರಿಸುವಾಗ ಬಹುತೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಗ್ರಾಹಕರಿಂದ ಇಪ್ಪತ್ತು ರೂ.ಗಳನ್ನು ವಸೂಲಿ ಮಾಡುತ್ತಿರುವುದು ಯಾವ ಕಾರಣಕ್ಕಾಗಿ ಎಂದು ಪ್ರಶ್ನಿಸಿ ಆಫಿಯಾ ಸೋಷಿಯಲ್ ವೆಲ್ಫೇರ್ ಟ್ರಸ್ಟ್ನಿಂದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಪ್ರತಿ ತಿಂಗಳು ಗ್ರಾಹಕರು ನ್ಯಾಯಬೆಲೆ ಅಂಗಡಿಗೆ ಹೋಗಿ ಬಯೋ ಮೆಟ್ರಿಕ್ ನೀಡಿದ ಕೂಡಲೆ ಒಬ್ಬರಿಂದ ಇಪ್ಪತ್ತು ರೂ.ಗಳನ್ನು ಅಕ್ರಮವಾಗಿ ವಸೂಲು ಮಾಡಲಾಗುತ್ತಿದೆ. ಏಕೆ ಎಂದು ಪ್ರಶ್ನಿಸಿದವರಿಗೆ ಪಡಿತರ ಧಾನ್ಯ ಸಿಗುವುದಿಲ್ಲವೆಂಬ ಬೆದರಿಕೆ ಹಾಕಲಾಗುತ್ತಿದೆ. ಇದರಿಂದ ಬಡವರಿಗೆ ಅನ್ಯಾಯವಾಗುತ್ತಿದೆ. ಸರ್ಕಾರವೇ ಉಚಿತವಾಗಿ ಪಡಿತರ ಧಾನ್ಯಗಳನ್ನು ನೀಡಿರುವಾಗಿ 20 ರೂ.ಗಳ ವಸೂಲಿ ಏಕೆ? ಕೂಡಲೆ ಇಂತಹ ಅಕ್ರಮ ವಸೂಲಾತಿಗೆ ಕಡಿವಾಣ ಹಾಕಿ ನ್ಯಾಯಬೆಲೆ ಅಂಗಡಿಗಳ ಮಾಲೀಕರುಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಆಫಿಯಾ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಸೈಯದ್ ಜಿಯಾವುಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕರನ್ನು ಒತ್ತಾಯಿಸಿದರು.
ಮಿರ್ಜಾ ಗಾಲಿಬ್ಬೇಗ್ ಈ ಸಂದರ್ಭದಲ್ಲಿ ಹಾಜರಿದ್ದರು.
















