Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ, 2028ಕ್ಕೆ ಕೇಳುವೆ : ಸತೀಶ್ ಜರಕಿಹೊಳಿ

---Advertisement---

ಬೆಂಗಳೂರು: ಕಾಂಗ್ರೆಸ್ ನಲ್ಲಿ ಈಗಾಗಲೇ ಸಿಎಂ ಸ್ಥಾನಕ್ಕಾಗಿ ಮನಸ್ತಾಪಗಳು ಎದ್ದಿವೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದು, ಡಿಕೆ ಶಿವಕುಮಾರ್ ಅವರು ವೈಟಿಂಗ್ ನಲ್ಲಿದ್ದಾರೆ. ಅದರ ನಡುವೆ ದಲಿತ ಸಿಎಂ ಸೇರಿದಂತೆ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಇದೀಗ ಸಚಿವ ಸತೀಶ್ ಜಾರಕಿಹೊಳಿ ಕೂಡ ನಾನು ಸಿಎಂ ಆಕಾಂಕ್ಷಿ. ಆದರೆ ಈಗಲ್ಲ ಎಂದಿದ್ದಾರೆ.

 

ಸದ್ಯಕ್ಕೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ. ಸಿದ್ದರಾಮಯ್ಯ ನವರೇ ಐದು ವರ್ಷ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಬೇರೆಯವರು ಹೇಳುವ ಅಗತ್ಯವಿಲ್ಲ. ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಪರಿಸ್ಥಿತಿ ಉದ್ಭವಿಸಿಲ್ಲ. ಹೈಕಮಾಂಡ್ ತೀರ್ಮಾನವೇ ನನ್ನ ತೀರ್ಮಾನ. ಸದ್ಯಕ್ಕೆ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. 2028ಕ್ಕೆ ಡಿಮ್ಯಾಂಡ್ ಇಡುತ್ತೇನೆ ಎಂದಿದ್ದಾರೆ.

 

ಮುಖ್ಯಮಂತ್ರಿ ಹುದ್ದೆಯನ್ನು ಬೇರೆಯವರು ಕೇಳುವುದು ಅವರವರ ಇಷ್ಟ. ಅನಾರೋಗ್ಯದ ಕಾರಣ ನಾನು ಮುಖ್ಯಮಂತ್ರಿ ಉಪಹಾರ ಕೂಟಕ್ಕೆ ಗೈರಾಗಿದ್ದೆ. ಸಭೆಗೆ ಗೈರಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಗಮನಕ್ಕೂ ತಂದಿದ್ದೇನೆ. ಮೀಟಿಂಗ್ ಹೋಗದೆ ಇದ್ದ ಕಾರಣ, ಬೇರೆ ಅರ್ಥ ಕಲ್ಪಿಸುವುದು ಬೇಡ. ಸಿಎಂ ಆಗುವ ಆಸೆ ನನಗೂ ಇದೆ. ಆ ಸಂಬಂಧ 2028ಕ್ಕೆ ಬೇಡಿಕೆ ಇಡುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment