Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೈಕ್ಲೋನ್ ಎಫೆಕ್ಟ್: ರಾಜ್ಯಾದ್ಯಂತ 5 ದಿನಗಳ ಕಾಲ ಮಳೆ..!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮಳೆಯ ಅಬ್ಬರ ಶುರುವಾಗಿದೆ. ಆರಂಭದಲ್ಲಿಯೇ ಉತ್ತಮ ಮಳೆಯಾಗುವ ಭರವಸೆ ನೀಡಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತವಾಗಿದ್ದು, ಮುಂದಿನ ಐದು ದಿನದಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆಯ ಸಂದೇಶವನ್ನು ನೀಡಿದೆ. ಮುಂದಿನ48 ಗಂಟೆಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡ ಪರಿಣಾಮ ಸೈಕ್ಲೋನ್ ಸೃಷ್ಠಿಯಾಗಿದೆ. ನಾಳೆ ರಿಮಲ್ ಹೆಸರಿನ ಸೈಕ್ಲೋನ್ ಸೃಷ್ಟಿಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ಉತ್ತರಾಭಿಮುಖವಾಗಿ ಚಲಿಸಲಿದೆ. ಮೇ 26ಕ್ಕೆ ಪಶ್ಚಿಮ ಬಂಗಾಳ ಅಥವಾ ಬಾಂಗ್ಲಾದೇಶದ ಬಳಿ ಸೈಕ್ಲೋನ್ ಭೂ ಸ್ಪರ್ಶ ಮಾಡಲಿದೆ. ಸೈಕ್ಲೋನ್ ಪರಿಣಾಮವಾಗಿ ಪಶ್ಚಿಮ ಬಂಗಾಳ, ಒರಿಸ್ಸಾ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಈ ಸೈಕ್ಲೋನ್ ನಿಂದಾಗಿ ಮುಂಗಾರು ತೀವ್ರವಾಗುವ ಸಾಧ್ಯತೆಯೂ ಇದೆ. ಕರ್ನಾಟಕದ ಬಳ್ಳಾರಿ, ಬೆಳಗಾವಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಚೆನ್ನಾಗಿಯೇ ಸುರಿಯುತ್ತಿದೆ. ನಿನ್ನೆಯಷ್ಟೇ ಕೊಂಚ ವಿಶ್ರಾಂತಿ ನೀಡಿರುವ ವರುಣರಾಯ, ಇಂದು ಮತ್ತೆ ಅಬ್ಬರಿಸುವ ಲಕ್ಷಣ ತೋರಿಸುತ್ತಿದ್ದಾನೆ. ಜೋರು ಬಿಸಿಲಿನ ಅನುಭವವಾಗುತ್ತಿದ್ದು, ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಮಳೆ ಬರುವ ಸೂಚನೆ ಇದೆ. ಹಿರಗೆ ಹೋಗವ ಬೈಕ್ ಸವಾರರು, ಕೆಲಸಗಾರರು ಮುನ್ನೆಚ್ಚರಿಕೆಯಾಗಿ ಕೊಡೆ, ರೈನ್ ಕೋಟ್ ಕೊಂಡೊಯ್ದರೆ ಉತ್ತಮ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರೇಣುಕಾಸ್ವಾಮಿ ಕೊಲೆ ಕೇಸ್ : ನಾಲ್ವರು ತುಮಕೂರು ಜೈಲಿಗೆ ಶಿಫ್ಟ್.. ಯಾಕೆ ಗೊತ್ತಾ..?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಸೇರಿದಂತೆ ಹದಿನೇಳು ಜನ ಜೈಲುಪಾಲಾಗಿದ್ದಾರೆ. ಶನಿವಾರ ನಾಲ್ವರ ಕಸ್ಟಡಿ ಅಂತ್ಯವಾದ ಹಿನ್ನೆಲೆ ಎಲ್ಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಇದೀಗ ಹೊಸ ಬೆಳವಣಿಗೆ ಏನು ಅಂದ್ರೆ ಹದಿನೇಳು

ಪವಿತ್ರಾ ಗೌಡ ಮನೆ ತೆಗೆದುಕೊಳ್ಳಲು 2 ಕೋಟಿ ಕೊಟ್ಟಿರುವ ಮೃತ ನಿರ್ಮಾಪಕ ಸೌಂದರ್ಯ ಜಗದೀಶ್..!

  ಬೆಂಗಳೂರು: ಅತ್ತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್.. ಇತ್ತ ರೇಣುಕಾಸ್ವಾಮಿ ಕೊಲೆ ಕೇಸ್. ಎರಡು ತನಿಖೆಯ ಹಂತದಲ್ಲಿಯೇ ಇದೆ. ಇದೀಗ ಸೌಂದರ್ಯ ಜಗದೀಶ್ ಹಾಗೂ ಪವಿತ್ರಾ ಗೌಡ ನಡುವೆ ಕೋಟಿ ಕೋಟಿ

ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ.ಎಸ್. ಮಂಜುನಾಥ್ ನೇಮಕ

ಸುದ್ದಿಒನ್, ಚಿತ್ರದುರ್ಗ, ಜೂನ್. 24  : ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿತ್ರದುರ್ಗ ಜಿಲ್ಲೆಯ ಜಿ. ಎಸ್.  ಮಂಜುನಾಥ್ ಇವರನ್ನು ಅಧ್ಯಕ್ಷರನ್ನಾಗಿ, ನಾಮ ನಿರ್ದೇಶನ  ಮಾಡಿ ಸಮಾಜ ಕಲ್ಯಾಣ ಇಲಾಖೆಯ ಉಪ

error: Content is protected !!