Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಶೋಕ್, ವಿಜಯೇಂದ್ರ ಮನೆ ಮುಂದೆ ಕಸ ಸುರಿಸ್ತೀನಿ ಎಂದ ಡಿ.ಕೆ.ಶಿವಕುಮಾರ್!

---Advertisement---

ನಗರದ ಕಸ ವಿಲೇವಾರಿಗೆ ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಕಸ ವಿಲೇವಾರಿ ಸಮರ್ಪಕವಾಗಿ ಮಾಡುತ್ತಿಲ್ಲ.  ಎಂದು ಆರೋಪ ಕೇಳಿಬರುತ್ತಿದೆ.ಆದರೆ ಇದಕ್ಕೆ ಡಿಕೆ ಶಿವಕುಮಾರ್ ಬಿಜೆಪಿ ಶಾಸಕರಿಗೆ ಎಚ್ಚರಿಗೆ ನೀಡಿದ್ದಾರೆ.

ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ‘ಬೆಂಗಳೂರಿನಲ್ಲಿ ಸರಿಯಾಗಿ ಕಸ ವಿಲೇವಾರಿ ನಡಸುತ್ತಿಲ್ಲ. ಬೆಂಗಳೂರಿನ ಕಸ ಎತ್ತಲು ಸಹ ಇವರಿಗೆ ಯೋಗ್ಯತೆ ಇಲ್ಲ. ಅವರಿಗೂ ಅನುದಾನ ಕೊಟ್ಟಿಲ್ಲ. ಇನ್ನೆರಡು ದಿನ ಕಳೆದರೆ ಸಿಲಿಕಾನ್ ಸಿಟಿ ಗಾರ್ಬೇಜ್ ಸಿಟಿ‌ ಆಗುತ್ತೆ.  ಎಂದಿದ್ದಾರೆ.

ನಗರದ ಕಸವನ್ನು ಎಲ್ಲಾದರೂ ಒಂದು ಕಡೆ ವಿಲೇವಾರಿ ಮಾಡಲೇಬೇಕು. ಅಲ್ಲೂ ಬೇಡ, ಇಲ್ಲೂ ಬೇಡ ಎಂದರೆ ಕಸವನ್ನು ಎಲ್ಲಿಗೆ ಹಾಕಬೇಕು? ಸುಮ್ಮನೆ ತಕರಾರು ತೆಗೆದರೆ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಅವರ ಮನೆ ಮುಂದೆ ಅಥವಾ ಬಿಜೆಪಿ ಕಚೇರಿಯ ಮುಂದೆಯೇ ಕಸದ ರಾಶಿ ಹಾಕಿಸಬೇಕಾಗುತ್ತದೆ,” ಎಂದು ವಾರ್ನಿಂಗ್ ನೀಡಿದರು.

ತಮ್ಮ ಕ್ಷೇತ್ರಗಳಿಗೆ ಅನುದಾನ ಪಡೆಯುವ ಉದ್ದೇಶದಿಂದ ಬಿಜೆಪಿಯ ಎಲ್ಲಾ ಶಾಸಕರು ಕಸದ ನೆಪವೊಡ್ಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. . ಎಲ್ಲರೂ ಗೌರವದಿಂದ ವರ್ತಿಸಿದರೆ ಸರಿ, ಇಲ್ಲದಿದ್ದರೆ ನಾವು ಕರುಣೆ ತೋರಿಸುವುದಿಲ್ಲ.ಕಸ ವಿಲೇವಾರಿಯಂತಹ ಅಗತ್ಯ ಸೇವೆಗಳಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ ಡಿ.ಕೆ ಶಿವಕುಮಾರ್

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...