ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ ಶುಕ್ರವಾರ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಡಿ.ಕೆಂಪಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಮಲ್ಲೇಶಪ್ಪ ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ನಲವತ್ತು ಪರ್ಸೆಂಟ್ ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿ ಪ್ರಧಾನಿ ಮೋದಿಗೆ ಪತ್ರ ಬರೆದು ರಾಷ್ಟ್ರದ ಗಮನ ಸಳೆದಿದ್ದ ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ದ ಹೋರಾಡಿದರು. ಸಣ್ಣಪುಟ್ಟ ಗುತ್ತಿಗೆದಾರರ ಜೊತೆಗೂ ಉತ್ತಮ ಒಡನಾಟವಿಟ್ಟುಕೊಂಡಿದ್ದ ಅವರ ನಿಧನದಿಂದ ಗುತ್ತಿಗೆದಾರರ ಸಂಘಕ್ಕೆ ಅಪಾರ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಅಜಯ್, ಉಪಾಧ್ಯಕ್ಷರುಗಳಾದ ಮಹೇಶ್, ಕರಿಯಪ್ಪ, ಜಂಟಿ ಕಾರ್ಯದರ್ಶಿ ಮೈಲಾರಪ್ಪ ಇನ್ನು ಅನೇಕರು ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks