Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಡಿ ಬಂಧನದ ಭೀತಿಯಿಂದ ನಾಪತ್ತೆಯಾಗಿದ್ದ ದದ್ದಲ್ ವಿಧಾನಸೌಧದಲ್ಲಿ ದಿಢೀರ್ ಪತ್ತೆ..!

---Advertisement---

ಬೆಂಗಳೂರು: ವಾಲ್ಮೀಕಿ ನಿಗಮದ ಅಭಿವೃದ್ಧಿ ಹಗರಣದಲ್ಲಿ ಶಾಸಕ ಬಸನಗೌಡ ದದ್ದಲ್ ಅವರ ಹೆಸರು ಕೇಳಿ ಬಂದಿದೆ. ಈಗಾಗಲೇ ಅಧಿಕಾರಿಗಳು ಅವರ ಮನೆ, ಕಚೇರಿಯನ್ನೆಲ್ಲಾ ಜಾಲಾಡಿದ್ದಾರೆ. ಇದರ ನಡುವೆ ಇಡಿ ಅಧಿಕಾರಿಗಳು ದದ್ದಲ್ ಅವರನ್ನು ವಶಕ್ಕೆ ಪಡೆದು, ಇನ್ನಷ್ಟು ವಿಚಾರಣೆ ನಡೆಸುವುದಕ್ಕೆ ತಯಾರಿ ನಡೆಸಿದ್ದರು. ಆದರೆ ಶಾಸಕ ದದ್ದಲ್ ಅಂದಿನಿಂದಲೂ ಇಡಿ ಅಧಿಕಾರಿಗಳಿಗೆ ಸಿಗದಂತೆ ನಾಪತ್ತೆಯಾಗಿದ್ದರು. ಇದೀಗ ವಿಧಾನಸೌಧದಲ್ಲಿ ಪತ್ತೆಯಾಗಿದ್ದಾರೆ.

ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗಿದೆ. ಎಲ್ಲಾ ಶಾಸಕರು, ಸಚಿವರು ಈ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ ಇಡಿ ಬಂಧನದ ಭೀತಿಯಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ಶಾಸಕ ಬಸನಗೌಡ ದದ್ದಲ್ ಅವರು ಕಾಣಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಕಾಣಿಸಿಕೊಂಡ ದದ್ದಲ್ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ.

ಇನ್ನು ಇದೇ ವೇಳೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದು, ನಾನು ಎಲ್ಲಿಯೂ ನಾಪತ್ತೆಯಾಗಿಲ್ಲ. ನಾನು ಎರಡು ದಿನ ಊರಿಗೆ ಹೋಗಿದ್ದೆ. ಇವತ್ತು ಕಲಾಪಕ್ಕೆ ಬಂದಿದ್ದೇನೆ. ಯಾವುದೇ ಇಡಿ ನೋಟೀಸ್ ನನಗೆ ತಲುಪಿಲ್ಲ. ಯಾವುದೇ ರೀತಿಯ ತನಿಖೆಗೂ ನಾನು ಸಹಕರಿಸುತ್ತೇನೆ. ಇವತ್ತು ಬಂದಿರುವುದು ಅಧಿವೇಶನಕ್ಕಾಗಿ ಎಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದದ್ದಲ್ ಅವರಿಗಾಗಿಯೂ ಇಡಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು‌. ಮಳೆಗಾಲದ ಅಧಿವೇಶನದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಹಗರಣಗಳ ವಿಚಾರವನ್ನೇ ಇಟ್ಟುಕೊಂಡು ವಾಗ್ದಾಳಿ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment