Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅ. 31 ರಂದು ದಿನಗೂಲಿ ಮತ್ತು ಕ್ಷೇಮಾಭಿವೃದ್ದಿ ನೌಕರರ ಸಭೆ : ನಾಗರಾಜ್ ಸಂಗಂ

Facebook
Twitter
Telegram
WhatsApp

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ: ದಿನಗೂಲಿ ಮತ್ತು ಕ್ಷೇಮಾಭಿವೃದ್ದಿ ನೌಕರರ ಸಭೆ ಅ.31 ರಂದು ಬೆಳಿಗ್ಗೆ 11 ಗಂಟೆಗೆ ರೋಟರಿ ಬಾಲಭವನ ಸಮೀಪವಿರುವ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಕಚೇರಿಯಲ್ಲಿ ನಡೆಯಲಿದೆ.

ಜಿಲ್ಲೆಯ ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ದಿನಗೂಲಿ ನೌಕರರಿಗೆ ಕಳೆದ ಏಪ್ರಿಲ್‍ನಿಂದ ವೇತನ ಪಾವತಿಯಾಗಿರುವುದಿಲ್ಲ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆದಿದ್ದು, ತಕ್ಷಣವೇ ವೇತನ ನೀಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದರೂ ಇದುವರೆವಿಗೂ ವೇತನ ಪಾವತಿಯಾಗಿರುವುದಿಲ್ಲ. ದಿನಗೂಲಿ ನೌಕರರ ಮೇಲೆ ದೌರ್ಜನ್ಯ ನಡೆಸುವ ಅಧಿಕಾರಿಗಳ ವಿರುದ್ದ ಧರಣಿ ನಡೆಸುವ ದಿನಾಂಕವನ್ನು ನಿಗಧಿಪಡಿಸಲಾಗುವುದು. ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳು ಹಾಗೂ ಇನ್ನಿತರೆ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು.

ಹೊಸದಾಗಿ ಸರ್ಕಾರ ನೀಡಿರುವ ತುಟ್ಟಿ ಭತ್ಯೆ, ವೇತನ ಪಾವತಿ ಮಾಡದಿರುವ ಬಗ್ಗೆ ಕ್ರಮ ವಹಿಸಲಾಗುತ್ತದೆ. ಎಲ್ಲಾ ದಿನಗೂಲಿ, ಕ್ಷೇಮಾಭಿವೃದ್ದಿ ನೌಕರರು ತಪ್ಪದೆ ಸಭೆಗೆ ಹಾಜರಾಗುವಂತೆ ಜಿಲ್ಲಾಧ್ಯಕ್ಷರಾದ ನಾಗರಾಜ್ ಸಂಗಂ ವಿನಂತಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

error: Content is protected !!