Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಲಿತ ರಾಜಕಾರಣಿಗಳು ಮೇಲ್ಜಾತಿಯವರ ಗುಲಾಮರಾಗಿದ್ದಾರೆ : ಹನುಮಂತಪ್ಪದುರ್ಗಾ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಇಂದಿನ ದಲಿತ ಹೋರಾಟಗಾರರಿಗೆ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಚಳುವಳಿಗಾರ ಪ್ರೊ.ಬಿ.ಕೃಷ್ಣಪ್ಪನವರ ಓದು ಅತ್ಯವಶ್ಯಕ ಎಂದು ಸಾಹಿತಿ ಜಡೆಕುಂಟೆ ಮಂಜುನಾಥ್ ತಿಳಿಸಿದರು.

ಜೈಭೀಮ್ ವಾರಿಯರ್ಸ್ ಹಾಗೂ ರಾಷ್ಟ್ರೀಯ ಭ್ರಷ್ಟಾಚಾರ ಮತ್ತು ಅಪರಾಧ ನಿರ್ಮೂಲನಾ ಮಂಡಳಿ ಆಶ್ರಯದಲ್ಲಿ ಇತ್ತೀಚೆಗೆ ಪತ್ರಕರ್ತರ ಭವನದಲ್ಲಿ ನಡೆದ ಪದಗ್ರಹಣ, ವಿಚಾರಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.

ಎಂಬತ್ತರ ದಶಕದಲ್ಲಿ ಈ ನಾಡಿನಲ್ಲಿ ಶೋಷಿತರು, ದಲಿತರ ಮೇಲೆ ನಡೆಯುತ್ತಿದ್ದ ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆ ಹಾಗೂ ಅತ್ಯಾಚಾರಗಳ ವಿರುದ್ಧ ಹುಟ್ಟಿಕೊಂಡ ದಲಿತ ಚಳುವಳಿ ಲಕ್ಷಾಂತರ ದಲಿತರ ಎದೆಯಾಳದಲ್ಲಿ ಪ್ರತಿಭಟನೆಯ ಕಿಚ್ಚು ಹಚ್ಚಿದೆ. ಈಗಿನ ಹೋರಾಟಗಾರರು ಅಂಬೇಡ್ಕರ್ ಹಾಗೂ ಪ್ರೊ.ಬಿ.ಕೃಷ್ಣಪ್ಪನವರ ವಿಚಾರ ಧಾರೆಗಳನ್ನು ತಿಳಿದುಕೊಂಡಾಗ ಮಾತ್ರ ಅವರ ಆಶಯಗಳನ್ನು ಗೌರವಿಸಿದಂತಾಗುತ್ತದೆ ಎಂದು ಹೇಳಿದರು.

ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪದುರ್ಗಾ ಮಾತನಾಡಿ ದಲಿತ ರಾಜಕಾರಣಿಗಳು ಮೇಲ್ಜಾತಿಯವರ ಗುಲಾಮರಾಗಿದ್ದಾರೆ. ಚಿತ್ರದುರ್ಗದ ಗೋನೂರಿನ ಸಮೀಪ ದಲಿತ ವಿದ್ಯಾರ್ಥಿನಿಯನ್ನು ಸುಟ್ಟು ಹತ್ಯೆಗೈದಿದ್ದರು ಮೀಸಲಾತಿಯಡಿ ಆಯ್ಕೆಯಾಗಿರುವ ಸಂಸದರಾಗಲಿ, ಶಾಸಕರಾಗಲಿ ದುಃಖತಪ್ತ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳುವಷ್ಟು ಮಾನವೀಯತೆಯಿಲ್ಲದಂತೆ ವರ್ತಿಸಿರುವುದು ಅತ್ಯಂತ ಖೇಧದ ಸಂಗತಿ. ಇನ್ನು ಮುಂದೆ ವಲಸೆ ರಾಜಕಾರಣಿಗಳನ್ನು ಚಿತ್ರದುರ್ಗಕ್ಕೆ ಬಿಟ್ಟುಕೊಳ್ಳುವುದಿಲ್ಲ. ಜಿಲ್ಲೆಯಾದ್ಯಂತ ಹೋರಾಟ ನಡೆಸಿ ದಲಿತರನ್ನು ಜಾಗೃತಿಗೊಳಿಸಲಾಗುವುದೆಂದರು.

ಜೈಭೀಮ್ ವಾರಿಯರ್ಸ್ ಹಾಗೂ ರಾಷ್ಟ್ರೀಯ ಭ್ರಷ್ಟಾಚಾರ ಮತ್ತು ಅಪರಾಧ ನಿರ್ಮೂಲನಾ ಮಂಡಳಿ ಸಂಸ್ಥಾಪಕ ಹೂವಿನಹಳ್ಳಿ ಚಂದ್ರಶೇಖರ್ ಮಾತನಾಡಿ ಪ್ರಸ್ತುತ ಸಮಾಜದಲ್ಲಿ ಎಲ್ಲಾ ವರ್ಗದವರು ಜೈಭೀಮ್ ಎನ್ನುವ ಘೋಷಣೆಯನ್ನು ಕೂಗಲು ಆರಂಭಿಸಿದ್ದಾರೆ. ಕಾರಣ ಅವರುಗಳು ಎಲ್ಲರಿಗೂ ಅನಿವಾರ್ಯ ಎನ್ನುವಂತಾಗಿದೆ. ದಲಿತ ಚಳುವಳಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಪ್ರೊ.ಬಿ.ಕೃಷ್ಣಪ್ಪನವರನ್ನು ಪರಿಚಯಿಸಿದೆ. ದಲಿತ ಚಳುವಳಿ ಒಂದು ದೊಡ್ಡ ವಿಶ್ವವಿದ್ಯಾಲಯವಿದ್ದಂತೆ ಎಂದರು.
ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡುತ್ತ ಬುದ್ದನ ಪಂಚಶೀಲ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದಲಿತ ಚಳುವಳಿಯ ಗುರಿ ತಲುಪಬೇಕಿದೆ ಎಂದು ನುಡಿದರು.

ಸುಜಾತ ಚಂದ್ರಶೇಖರ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಉಪಾಧ್ಯಕ್ಷ ಶ್ರೀನಿವಾಸ್, ಅಟ್ರಾಸಿಟಿ ಕಮಿಟಿ ಮಾಜಿ ಅಧ್ಯಕ್ಷ ದಲಿತ ಮುಖಂಡ ಬಿ.ರಾಜಪ್ಪ, ಕೆಂಚಪ್ಪ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...