ದೇಶಕ್ಕೆ ಕಾದಿದ್ಯಂತೆ ಗಂಡಾಂತರ : ಕೋಡಿಮಠ ಶ್ರೀಗಳು ಹೇಳಿದ್ದೇನು..?

suddionenews
1 Min Read

 

 

ಕೋಲಾರ: ಕೋಡಿ ಮಠದ ಶ್ರೀಗಳು ನುಡಿಯುವ ಭವಿಷ್ಯಗಳು ಹಲವು ಬಾರಿ ಸತ್ಯವಾಗಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲೂ ಕೋಡಿಶ್ರೀ ಮಠದ ಶ್ರೀಗಳ ಭವಿಷ್ಯ ಸತ್ಯವಾಗಿತ್ತು. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರ ಹೆಚ್ಚಲಿವೆ. ಆದರೆ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದರು. ಅದು ಸತ್ಯ ಕೂಡ ಆಗಿತ್ತು.

ಇದೀಗ ಕೋಡಿಮಠದ ಶ್ರೀಗಳು ಮತ್ತೊಂದು ಭವಿಷ್ಯ ನುಡಿದಿದ್ದು, ದೇಶದ ಭವಿಷ್ಯದ ಬಗ್ಗೆ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಶ್ರೀಗಳು, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬರುತ್ತೆ ಎಂದು ಹೇಳಿದ್ದೆ. ಈ ವರ್ಷದಲ್ಲಿ ದೊಡ್ಡ ಅವಘಡ ಸಂಭವಿಸುತ್ತದೆ ಎಂದು ಹೇಳಿದ್ದೆ. ಅದರಂತೆ ರೈಲು ದುರಂತ ನಡೆದಿದೆ. ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ ಎಂದಿದ್ದಾರೆ.

ಈ ವರ್ಷ ಎರಡು‌ ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿವೆ. ಎಲ್ಲೋ ನಡೆದ ಬಾಂಬ್ ಸ್ಪೋಟದಿಂದ ನಮಗೆ ಅನಾಹುತ ಸಂಭವಿಸಲಿದೆ ಎಂದಿದ್ದಾರೆ. ಈ ಭವಿಷ್ಯ ಕೇಳಿ ಜನ ಆಘಾತಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *