Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಎ1 ಆರೋಪಿ ಆಗ್ತಾರಾ..? ಪೊಲೀಸರ ಕೈ ಸೇರಿರುವ ಸಾಕ್ಷಿ ಏನು..?

Facebook
Twitter
Telegram
WhatsApp

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ, ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಕಾರಣಕ್ಕೆ ಶೆಡ್ ಗೆ ಕರೆದು ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕೊಲೆ ಕೇಸಲ್ಲಿ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಕೇಸಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ದರ್ಶನ್ ಎ2 ಆರೋಪಿಯಾಗಿದ್ದಾರೆ. ಆದರೆ ದಿನೇ ದಿನೇ ಕೇಸ್ ಸ್ಟ್ರಾಂಗ್ ಆಗ್ತಾ ಇದ್ದು, ಈಗ ದರ್ಶನ್ ಅವರೇ ಎ1 ಆರೋಪಿಯಾಗುವ ಸಾಧ್ಯತೆ ದಟ್ಟವಾಗಿದೆ.

ಈಗಾಗಲೇ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅನುಕುಮಾರ್ ಕೂಡ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ ದರ್ಶನ್ ಮಾತ್ರ ಇನ್ನು ಯಾವುದೇ ರೀತಿಯ ಅರ್ಜಿ ಸಲ್ಲಿಕೆ ಮಾಡಿಲ್ಲ. ಇದೀಗ ಪೊಲೀಸರಿಗೆ ಸಿಕ್ಕಂತ ಸಾಕ್ಷಿಗಳೆಲ್ಲಾ ದರ್ಶನ್ ಅವರ ಕಡಗೆ ಬೆರಳು ಮಾಡಿ ತೋರಿಸುತ್ತಿವೆ ಎನ್ನಲಾಗಿದೆ.

ಪೊಲೀಸರು ಆರೋಪಿಗಳ ಮೊಬೈಲ್ ಅನ್ನು ರಿಟ್ರೀವ್ ಮಾಡಿದ್ದು, ನಾಲ್ಕು ಫೋಟೋಗಳು ಸಿಕ್ಕಿವೆ ಎನ್ನಲಾಗಿದೆ. ಆ ಫೋಟೋಗಳಲ್ಲಿ , ರೇಣುಕಾಸ್ವಾಮಿ ಕೊನೆಯ ಬಾರಿಗೆ ಕೈಮುಗಿದು ಬೇಡಿಕೊಂಡಿದ್ದಾರೆ ಎನ್ನಲಾಗಿದೆ. ದೇಹ ರಕ್ತಸಿಕ್ತವಾಗಿದ್ದರು, ಆರೋಪಿಗಳು ಆತನನ್ನು ಬಿಟ್ಟಿಲ್ಲ. ಹೀಗಾಗಿ ನಟ ದರ್ಶನ್ ಅವರನ್ನು ಎ2 ಆರೋಪಿ ಸ್ಥಾನದಿಂದ ಎ1 ಆರೋಪಿ ಸ್ಥಾನಕ್ಕೆ ಇಳಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ. ಈಗಾಗಲೇ ದರ್ಶನ್ ಅಂಡ್ ಗ್ಯಾಂಗ್ 70 ಕ್ಕೂ ಹೆಚ್ಚು ದಿನದಿಂದ ಜೈಲಿನಲ್ಲಿದ್ದಾರೆ. ಇನ್ನು ದರ್ಶನ್ ಗಾಗಿ ಪತ್ನಿ ವಿಜಯಲಕ್ಷ್ಮೀ ದೇವಸ್ಥಾನಗಳನ್ನು ಸುತ್ತುತ್ತಾ ಇದ್ದಾರೆ. ಹಾಗೇ ಅಭಿಮಾನಿಗಳು ಕೂಡ ದರ್ಶನ್ ಹೊರಗೆ ಬರಲಿ ಎಂದೇ ಬೇಡಿಕೊಳ್ಳುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!