ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ನೂರು ದಿನಗಳ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಅಂದ್ರೆ ಶನಿವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ 57ನೇ ಸಿಸಿಹೆಚ್ ನ್ಯಾಯಾಲಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು ಸಹ ಟೆನ್ಶನ್ ನಲ್ಲಿಯೇ ಕಾಲ ಕಳೆಯುತ್ತಿದ್ದಾರೆ.
ದರ್ಶನ್ ಗೆ ಹಲವು ಸೌಲಭ್ಯಗಳು ಜೈಲಿನಲ್ಲಿವೆ. ದರ್ಶನ್ ಗೆ ಅಂತಲ್ಲ ಅರೋಪಿಗಳಿಗೆ ಇರುವಂತ ಸೌಲಭ್ಯಗಳು. ಅಂದ್ರೆ ದರ್ಶನ್ ಮನೆಯವರ ಜೊತೆಗೆ ದೂರವಾಣಿಯ ಮೂಲಕವೂ ಮಾತನಾಡಬಹುದು. ಅದು ಕೇವಲ 5 ನಿಮಿಷ ಮಾತ್ರ. ಪ್ರಿಸನ್ ಕಾಲ್ ಸಿಸ್ಟಮ್ ನಡಿಯಲ್ಲಿ ತನ್ನ ತಾಯಿಯ ಜೊತೆಗೆ ದರ್ಶನ್ ಮಾತನಾಡಿದ್ದಾರೆ. ಈ ಪರಿಸ್ಥಿತಿಯಲ್ಲಿ ದರ್ಶನ್ ಧೈರ್ಯ ತುಂಬುವವರೇ ಬೇಕಾಗಿರುವುದು. ಹೆತ್ತ ಕರುಳು ಮಗ ಸಂಕಟ ಪಡುವುದನ್ನು ಸಹಿಸದ ಕಾರಣ ಧೈರ್ಯ ತುಂಬಿದ್ದಾರೆ.
ದೂರವಾಣಿಯಲ್ಲಿ ಮಾತನಾಡಿದ ಮೀನಾ ತೂಗುದೀಪ, ಕೆಟ್ಟ ಗಳಿಗೆಯಿಂದ ಘಟನೆ ನಡೆದು ಹೋಗಿದೆ, ಧೈರ್ಯವಾಗಿರು. ರಾಜರಾಜೇಶ್ವರಿ ತಾಯಿ, ಚಾಮುಂಡೇಶ್ವರಿ ತಾಯಿ ಆಶೀರ್ವಾದ ನಿನ್ನ ಮೇಲಿದೆ. ಒಳ್ಳೆಯದ್ದೇ ಆಗುತ್ತೆ. ನಾನು ಮತ್ತೆ ಬಳ್ಳಾರಿಗೆ ಬರುತ್ತೇನೆ ಎಂದು ಧೈರ್ಯ ತುಂಬಿದ್ದಾರೆ. ತಾಯಿಯ ಜೊತೆಗೆ ಮಾತನಾಡುತ್ತಾ, ದರ್ಶನ್ ಭಾವುಕರಾಗಿದ್ದಾರೆ ಎನ್ನಲಾಗಿದೆ.
ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದು, ನಿನ್ನೆಯಿಂದ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ದರ್ಶನ್ ಕೂಡ ಆದಷ್ಟು ಬೇಗ ಜಾಮೀನು ಸಿಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳು ಎಲ್ಲಾ ದೇವರಿಗೂ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…